ವಕೀಲರು vs ಪೊಲೀಸರ ಸಂಘರ್ಷ: ಸಿಐಡಿ, ಡಿಐಜಿ ವಂಶಿಕೃಷ್ಣ ತೀವ್ರ ತನಿಖೆ
1 min readಚಿಕ್ಕಮಗಳೂರು: ವಕೀಲರು ಹಾಗೂ ಪೊಲೀಸರ ನಡುವಿನ ಸಂಘರ್ಷದ ತನಿಖೆ ತೀವ್ರಗೊಂಡಿದೆ. ಖುದ್ದು ಸಿಐಡಿ ಡಿಐಜಿ ವಂಶಿಕೃಷ್ಣ ಇಂದು ಚಿಕ್ಕಮಗಳೂರಿಗೆ ಆಗಮಿಸಿ ನಗರದ ಪ್ರವಾಸಿ ಮಂದಿರದಲ್ಲಿ ವಕೀಲ ಪ್ರೀತಂ ವಿಚಾರಣೆ ಆರಂಭಿಸಿದ್ದಾರೆ.
ಚಿಕ್ಕಮಗಳೂರಲ್ಲಿ ಪೊಲೀಸ್ ಲಾಯರ್ ಗಲಾಟೆ ಪ್ರಕರಣದ ಸಿಐಡಿ ತನಿಖೆ ಚುರುಕು ಪಡೆದಿದೆ, ಖುದ್ದು ಸಿಐಡಿ ಡಿಐಜಿ ವಂಶಿಕೃಷ್ಣ ನೇತೃತ್ವದಲ್ಲಿ ತನಿಖೆ ಆರಂಭಗೊಂಡಿದ್ದು ಪೊಲೀಸರಿಂದ ಹಲ್ಲೆಗೊಳಗಾದ ವಕೀಲ ಪ್ರೀತಂನನ್ನ ವಿಚಾರಣೆಗೊಳಪಡಿಸಲಾಗಿದೆ. ನಗರದ ಪ್ರವಾಸಿ ಮಂದಿರದಲ್ಲಿ ತೀವ್ರ ವಿಚಾರಣೆ ನಡೆಯುತ್ತಿದ್ದು ಸಿಐಡಿ ಡಿಐಜಿ ವಂಶಿಕೃಷ್ಣ, ಸಿಐಡಿ ಎಸ್ಪಿ ವೆಂಕಟೇಶ್, ಡಿವೈಎಸ್ಪಿ ಉಮೇಶ್ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದ್ದು ಹೆಲ್ಮೆಟ್ ಗಲಾಟೆ ಆರಂಭವಾದಾಗಿನಿಂದ ಠಾಣೆಯಲ್ಲಿ ಏನೇನಾಯ್ತು ಎಂಬ ಸಂಪೂರ್ಣ ಮಾಹಿತಿ ಕಲೆ ಹಾಕುತ್ತಿದ್ದಾರೆ. ಪ್ರೀತಂ ಬಳಿಕ 6 ಜನ ಪೊಲೀಸರನ್ನ ಸಹಾ ವಿಚಾರಣೆ ನಡೆಸಲಿದ್ದಾರೆ. ಉನ್ನತ ಮಟ್ಟದ ಅಧಿಕಾರಿಗಳಿಂದಲೇ ಪೊಲೀಸ್-ವಕೀಲರ ಗಲಾಟೆ ವಿಚಾರಣೆ ನಡೆಯುತ್ತಿದ್ದು ಚಿಕ್ಕಮಗಳೂರು ನಗರದಲ್ಲಿ ನವೆಂಬರ್ 30 ರಂದು ನಡೆದಿದ್ದ ಘಟನೆ ಇಂಚಿಂಚೂ ಮಾಹಿತಿ ಹೊರಬೀಳಲಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g