ರಾಷ್ಟ್ರಪತಿಗಳಾಗಿ ದ್ರೌಪದಿ ಮುರ್ಮು ಆಯ್ಕೆಗೆ ಅಭಿನಂದನೆ
1 min readಚಿಕ್ಕಮಗಳೂರು : ಪರಿಶಿಷ್ಟ ಪಂಗಡದ ಮಹಿಳೆಯಾದ ದ್ರೌಪದಿ ಮುರ್ಮುರವರು ದೇಶದ ರಾಷ್ಟ್ರಪತಿಗಳಾಗಿದ್ದು ಅವರಿಗೆ ಹಾಗೂ ಬಿ.ಜೆ.ಪಿ. ಪಕ್ಷಕ್ಕೆ ಅಭಿನಂದನೆಗಳನ್ನು ಹೇಳುತ್ತೇವೆ ಎಂದು ಭಾರತೀಯ ಜನತಾ ಪಕ್ಷದ ಜಿಲ್ಲಾ ಎಸ್.ಟಿ. ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ನಂದೀಶ್ ಮದಕರಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ತಮ್ಮ ಪರಿಶ್ರಮದ ಸಾಧನೆಯಿಂದ ಪರಿಶಿಷ್ಟ ಪಂಗಡದ ಮಹಿಳೆಯೊಬ್ಬರು ಪ್ರಥಮ ಬಾರಿಗೆ ದೇಶದ ರಾಷ್ಟ್ರಪತಿಯಾಗಿದ್ದು,ಯಾಗುವ ಮೂಲಕ ಪರಿಶಿಷ್ಟ ಪಂಗಡಕ್ಕೆ ಗೌರವ ತರುವ ಕೆಲಸ ಮಾಡಿದ್ದಾರೆ. ಇದಕ್ಕೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿಯವರಿಗೂ ಹಾಗೂ ಬಿ.ಜೆ.ಪಿ ಪಕ್ಷಕ್ಕೂ ಎಸ್ಸ್.ಟಿ. ಸಮುದಾಯಗಳ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದು ಹೇಳಿದರು.
ಈ ವೇಳೆ ಬಿಜೆಪಿ ಜಿಲ್ಲಾ ಎಸ್.ಟಿ. ಮೋರ್ಚಾದ ಅಧ್ಯಕ್ಷರಾದ ಸುಂದರ್ ಕುಮಾರ್, ಜಿಲ್ಲಾ ಉಸ್ತುವಾರಿ ಲಕ್ಷ್ಮಣ್ ನಾಯಕ್, ಪ್ರಧಾನ ಕಾರ್ಯದರ್ಶಿ ರೇಖಾ ಅನಿಲ್, ನಗರ ಅಧ್ಯಕ್ಷ ಪ್ರದೀಪ್ ಬಿ.ಆರ್, ಗ್ರಾಮಾಂತರ ಅಧ್ಯಕ್ಷ ಮಧುಕುಮಾರ್ ಹೆಚ್.ಎಂ ಉಪಸ್ಥಿತರಿದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g