May 10, 2024

MALNAD TV

HEART OF COFFEE CITY

ಮೀಸಲಾತಿ ಹಂಚಿಕೆ ತಾರತಮ್ಯಕ್ಕೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನೇರ ಹೊಣೆ: ಕೆ.ಟಿ ರಾಧಾಕೃಷ್ಣ

1 min read

ಚಿಕ್ಕಮಗಳೂರು: ಕಾಂತರಾಜು ಆಯೋಗ, ಸದಾಶಿವ ಆಯೋಗ ಜಾರಿಗೆ ಒತ್ತಾಯಿಸಿ ರಾಜ್ಯಾದ್ಯಂತ ಎಲ್ಲಾ ಜಿಲ್ಲಾಧಿಕಾರಿ ಕಚೇರಿ ಬಳಿ ಬಹುಜನ ಸಮಾಜ ಪಕ್ಷದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಎಸ್ ಪಿ ಜಿಲ್ಲಾಧ್ಯಕ್ಷ ಕೆ.ಟಿ ರಾಧಾಕೃಷ್ಣ ತಿಳಿಸಿದರು.

ನಗರದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಎರಡೂ ಆಯೋಗಗಳ ವರದಿಯನ್ನು ಯಥಾವತ್ತಾಗಿ ರಾಜ್ಯ ವಿಧಾನಸಭೆಯಲ್ಲಿ ಮಂಡಿಸಿ ಶೀಘ್ರ ಜಾರಿಗೊಳಿಸಬೇಕೆಂದು ಆಗ್ರಹಿಸಲಾಗುದು ಎಂದರು. ಇದೇ ನವೆಂಬರ್ 21 ರಾಜ್ಯದ ಎಲ್ಲಾ ಡಿ.ಸಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಗುವುದು ಮತ್ತು ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಧಾಕೃಷ್ಣ ಹೇಳಿದರು.
ಮೀಸಲಾತಿ ಅನುಷ್ಠಾನ ಮಾಡುವಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ವಿಫಲವಾಗಿವೆ.‌ ಪ್ರಣಾಳಿಕೆ ಹೇಳಿ ನಿರಂತರವಾಗಿ ದ್ರೋಹ ಮಾಡಿವೆ. ಗೆದ್ದು 6 ತಿಂಗಳಾದರೂ ರಾಜ್ಯ ಸರ್ಕಾರವು ಅದೇ ಧೋರಣೆ ಅನುಸರಿಸಿದೆ. ಮೀಸಲಾತಿ ಹಂಚಿಕೆಯಲ್ಲಿ ತಾರತಮ್ಯಕ್ಕೆ ಕಾಂಗ್ರೆಸ್ ಬಿಜೆಪಿ ಜೆಡಿಎಸ್ ನೇರ ಹೊಣೆ ಎಂದು ಅವರು ಆರೋಪಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!