ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಜನರಿಗೆ ಮೋಸ ಮಾಡಿದ್ದಾರೆ – ಕಲ್ಮುರಡಪ್ಪ
1 min readಚಿಕ್ಕಮಗಳೂರು-ಚುನಾವಣಾ ಪೂರ್ವ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಬಿಪಿಎಲ್ ಪಡಿತರ ಚೀಟಿದಾರರಿಗೆ ತಲಾ 10 ಕಿಲೋ ಅಕ್ಕಿ ವಿತರಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಇಂದು ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.ಬಿಜೆಪಿ ಕಚೇರಿ ಪಾಂಚಜನ್ಯದಿoದ ಬಿಜೆಪಿ ಬಾವುಟದೊಂದಿಗೆ ಮಹಿಳೆಯರು ಸೇರಿದಂತೆ ಮೆರವಣಿಗೆಯಲ್ಲಿ ಸಾಗಿಬಂದ ಹಲವಾರು ಕಾರ್ಯಕರ್ತರು ಆಜಾದ್ಪಾರ್ಕಿನಲ್ಲಿ ಸಮಾವೇಶಗೊಂಡು ಚೀಲದಲ್ಲಿ ಅಕ್ಕಿ ಪ್ರದರ್ಶಿಸಿ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿದರು.ಪಕ್ಷದ ಜಿಲ್ಲಾಧ್ಯಕ್ಷ ಕಲ್ಮರುಡಪ್ಪ ಮಾತನಾಡಿ, ರಾಜ್ಯದಲ್ಲಿ 5 ಗ್ಯಾರಂಟಿಗಳ ಭರವಸೆ ನೀಡಿ ಕಾಂಗ್ರೆಸ್ ಸಮ್ಮಿಶ್ರ ಸರಕಾರ ಅಧಿಕಾರಕ್ಕೆಬಂದಿದೆ. ಚುನಾವಣೆಗೂ ಮುನ್ನ 5 ಗ್ಯಾರಂಟಿಗಳನ್ನು ಮೊದಲ ಕ್ಯಾಬಿನೆಟ್ನಲ್ಲೇ ಯಾವುದೇ ಷರತ್ತುಗಳಿಲ್ಲದೆ ನೀಡುತ್ತೇವೆ ಎಂದು ಭರವಸೆ ನೀಡಿದ್ದರು ಎಂದು ತಿಳಿಸಿದರು. ಇನ್ನೂ ಮೊದಲ ಕ್ಯಾಬಿಬೆಟ್ ನಡೆದಿಲ್ಲವಾ ಎಂದು ಪ್ರಶ್ನಿಸಿ ನಿಮ್ಮದು ಮಾತು ತಪ್ಪಿದ ಸರಕಾರ ಎಂದು ದೂರಿದರು. ಕೇಂದ್ರ ಸರಕಾರದ 5 ಕಿಲೋ ಅಕ್ಕಿಯಲ್ಲಿ 2 ಕೆ.ಜಿ ತಿಂದು ಕೇವಲ 3 ಕಿಲೋ ನೀಡಲಾಗುತ್ತಿದೆ. ಎರಡೂ ಸರಕಾರದ 15 ಕಿಲೋ ಅಕ್ಕಿಯನ್ನು ಕೂಡಲೇ ಕೊಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ವರಸಿದ್ದಿವೇಣುಗೋಪಾಲ, ಬಿಜೆಪಿ ಕಾರ್ಯದರ್ಶಿ ದೇವರಾಜ ಶೆಟ್ಟಿ, ಮುಖಂಡರಾದ ಕೋಟೆ ರಂಗನಾಥ, ಕೆ.ಪಿ ವೆಂಕಟೇಶ್, ಮಧುಕುಮಾರರಾಜ್ ಅರಸ್, ಈಶ್ವರಹಳ್ಳಿ ಮಹೇಶ್, ಪುಷ್ಪರಾಜ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g