May 19, 2024

MALNAD TV

HEART OF COFFEE CITY

ಕಾಂಗ್ರೆಸ್ ಪಾದಯಾತ್ರೆ ಬಿಜೆಪಿಗೆ ಭಯ: ದೇವರಾಜ್

1 min read

ಚಿಕ್ಕಮಗಳೂರು: ಬೆಂಗಳೂರಿಗೆ ಕುಡಿಯುವ ನೀರೊದಗಿಸಲು ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಮೇಕೆದಾಟು ಪಾದಯಾತ್ರೆಯಿಂದ ಆಡಳಿತ ಪಕ್ಷ ಬಿಜೆಪಿಗೆ ಭಯ ಮತ್ತು ದಿಗಿಲು ಉಂಟಾಗಿದೆ ಎಂದು ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಸೋಮವಾರ ಮಾತನಾಡಿ, ಯಾವುದೇ ರಾಜಕೀಯ ಪಕ್ಷದ ಮುಖಂಡರು ಮೊದಲು ಚಳವಳಿಗೆ ಗೌರವಕೊಡಬೇಕು.ಇದು ರಾಜಕೀಯ ಪ್ರೇರಿತಹೋರಾಟವಲ್ಲ, ಆ ಭಾಗದ ಜನರಿಗೆ ನ್ಯಾಯಕೊಡಿಸಲು,ಈ ಪಾದಯಾತ್ರೆಗೆ ಕಂದಾಯ ಸಚಿವ ಆರ್.ಅಶೋಕ್ ಘನತೆ, ಗೌರವವನ್ನು ಬಿಟ್ಟು ಅಸಡ್ಡೆಯಿಂದ ಮಾತನಾಡಿದ್ದಾರೆಂದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧಪಕ್ಷದ ಮುಖಂಡ ಸಿದ್ಧರಾಮಯ್ಯನವರ ನೇತೃತ್ವದಲ್ಲಿ ಆರಂಭಗೊಂಡಿರುವ ಪಾದಯಾತ್ರೆಯಲ್ಲಿ ಭಾಗವಹಿಸಲಾಗುವುದು. ಚಳವಳಿ ಬಗ್ಗೆ ಕ್ಷುಲ್ಲಕವಾಗಿ ಮಾತನಾಡಿರುವ ಅಶೋಕ್ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿದರು.

ಕಾಂಗ್ರೆಸ್ ಪಕ್ಷ ಮೇಕೆ ಮತ್ತು ಮಾಂಸಕ್ಕಾಗಿ ಹೋರಾಡುತ್ತಿಲ್ಲ, ಆಡಳಿತ ಪಕ್ಷದ ಸಚಿವರು ಹುಂಬತನವನ್ನು ಕೈಬಿಟ್ಟು ರಾಜ್ಯದ ಜನರ ಸಮಸ್ಯೆಗೆ ಸ್ಪಂದಿಸಬೇಕಿದೆ. ಪಟಾಕಿ ಹೊಡೆದು ಚಟಾಕಿ ಹಾರಿಸುವುದನ್ನು ಇನ್ನಾದರೂ ನಿಲ್ಲಿಸಬೇಕಿದೆ ಎಂದರು.
ಅತಿವೃಷ್ಟಿಯಿಂದ ಬೆಳೆಕಳೆದುಕೊಂಡಿರುವ ರೈತರಿಗೆ ಹೆಕ್ಟೇರ್‍ಗೆ 15ಸಾವಿರ ರೂ. ನೀಡುವುದಾಗಿ ಕಂದಾಯ ಸಚಿವರು ಆದೇಶನೀಡಿದ್ದು, ಇದುವರೆಗೂ ಬಿಡಿಕಾಸು ಬಿಡುಗಡೆಗೊಂಡಿಲ್ಲವೆಂದು ಟೀಕಿಸಿ, ಸಚಿವರ ಮಾತುಗಳು ಕೇವಲ ಭಾಷಣಕ್ಕೆ ಸೀಮಿತಗೊಂಡಿವೆ ಎಂದು ಹೇಳಿದರು

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!