May 16, 2024

MALNAD TV

HEART OF COFFEE CITY

ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ಮೋಸ ಮಾಡಿಲ್ಲ-ನಯಾಜ್ ಆಹಮದ್

1 min read

ನಗರಸಭೆ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳಲ್ಲಿ ಟಿಕೆಟ್ ನೀಡುವ ಮೂಲಕ ಸಮುದಾಯಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ನಯಾಜ್ ಅಹ ಮದ್ ಹೇಳಿದ್ರು.

ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ೩೫ವಾರ್ಡ್ಗಳ ೧೨ ಸ್ಥಾನಗಳಲ್ಲಿ ೯ ಮುಸ್ಲಿಮ್ ಸಮುದಾಯಕ್ಕೆ ೩ ಸ್ಥಾನ ಕ್ರಿಶ್ಚಿಯನ್ ಸಮುದಾಯದವರಿಗೆ ಟಿಕೆಟ್ ನೀಡಲಾಗಿದೆ. ೬ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದೇವೆ ಎಂದರು.
ಸಿ.ಎನ್.ಅಕ್ಮಲ್ ಮತ್ತು ಅವರ ಸಹೋದರ ಅಜ್ಮಲ್ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು, ಸಿ.ಎನ್.ಅಕ್ಮಲ್ ಪಕ್ಷದ ಅಧಿಕೃತ ಅಭ್ಯರ್ಥಿಯ ಮುಂದೆ ಸ್ಪರ್ಧಿಸಿ ೩ ಮತಗಳಲ್ಲಿ ಸೋಲುವಂತೆ ಮಾಡಿದ್ದಾರೆ. ಎಸ್‌ಡಿಪಿಐ ನೇರವಾಗಿ ಬೆಂಬಲಿಸಿ ತಮ್ಮ ಪಕ್ಷದ ಅಭ್ಯರ್ಥಿ ಸೋಲುವಂತೆ ಮಾಡಿದ್ದು, ಅಲ್ಲದೆ ನಾಲ್ಕಾರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿದರು.

ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಸಿ.ಎನ್.ಅಕ್ಮಲ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದು, ಅವರು ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ, ಎಂದರು.
ಜಿಲ್ಲಾ ಕಾಂಗ್ರೆಸ್ ವಕ್ತಾರ ಶಿವಾನಂದಸ್ವಾಮಿ ಮಾತನಾಡಿ, ಕಾಂಗ್ರೆಸ್ ಪಕ್ಷದ ಆತ್ಮಾವಲೋಕನ ಸಭೆಗೆ ಆಹ್ವಾನ ನೀಡಿದವರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗಿತ್ತು. ಆದರೆ, ಪಕ್ಷದಲ್ಲಿ ಇಲ್ಲದವರೂ ಮತ್ತು ಆಹ್ವಾನ ಇಲ್ಲದವರೂ ಬಂದು ಸಭೆಯಲ್ಲಿ ಗೊಂದಲ ಸೃಷ್ಟಿ ಮಾಡಿ
ದರು ಎಂದರು.
ವಿಧಾನ ಪರಿಷತ್ ಉಪಸಭಾಪತಿ ಬಿ.ಎಲ್.ಶಂಕರ್ ತಮ್ಮಿಂದ ೧೫ಲಕ್ಷ ರೂ. ಸಾಲ ಪಡೆದು ಕೊಂಡಿದ್ದಾರೆಂಬ ಸಿ.ಎನ್.ಅಕ್ಮಲ್ ಅವರ ಆರೋಪ ಸುಳ್ಳು. ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದರಿಂದ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!