ರಾಮಮಂದಿರ ಉದ್ಘಾಟನೆ ವೇಳೆ ಕೋಮು ದಳ್ಳುರಿಗೆ ಕಾಂಗ್ರೆಸ್ ಪ್ಲಾನ್ ಮಾಡಿದೆ : ಶೋಭಾ ಕರಂದ್ಲಾಜೆ
1 min read
ರಾಮಮಂದಿರ ಉದ್ಘಾಟನೆ ವೇಳೆ ದೇಶದಲ್ಲಿ ಕೋಮು ದಳ್ಳುರಿ ಎಬ್ಬಿಸಲು ಕಾಂಗ್ರೆಸ್ ಪ್ಲಾನ್ ಮಾಡುತ್ತಿದೆ. ಬಿ.ಕೆ ಹರಿಪ್ರಸಾದ್ ಹೇಳಿಕೆ ಇದರ ಒಂದು ಝಲಕ್ ಆಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ ನ ಮಾನಸಿಕ ಸ್ಥಿತಿಯೇ ಕೋಮು ಗಲಭೆ ಸೃಷ್ಟಿಸುವುದು, ಪಿಎಫ್ಐ ನಂತಹ ದೇಶ ದ್ರೋಹಿಗಳ ,ಭಯೋತ್ಪಾದಕರ ಕೇಸ್ ಗಳನ್ನು ಹಿಂದಕ್ಕೆ ಪಡೆಯುವುದಾಗಿದೆ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರು ನಗರದ ವಿಜಯಪುರದಲ್ಲಿ ರಾಮಮಂದಿರ ಮಂತ್ರಾಕ್ಷತೆ ಮನೆ ಮನೆಗೆ ಹಂಚಿದ ನಂತರ ಮಾತನಾಡಿದ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಭಯೋತ್ಪಾದಕ ದಾಳಿ ನಡೆದಿವೆ. ರಾಜ್ಯದಲ್ಲಿ ವಿದ್ವಂಸಕ ಕೃತ್ಯ ಪ್ಲಾನ್ ನ ಪ್ರಕರಣಗಳು ಮಂಗಳೂರು ಪುತ್ತೂರು ಹುಬ್ಬಳ್ಳಿ ಬಳ್ಳಾರಿ ಗಳಲ್ಲಿ ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಇವುಗಳನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ ಈ ಮೂಲಕ ದೇಶ ದ್ರೋಹಿಗಳನ್ನು ರಕ್ಷಿಸುವ ಕೆಲಸ ನಿರಂತರವಾಗಿ ಸಿದ್ದರಾಮಯ್ಯ ಸರ್ಕಾರ ಮಾಡುತ್ತಿದೆ ಎಂದು ಶೋಭಾ ವಾಗ್ದಾಳಿ ನಡೆಸಿದರು. ಚಿಕ್ಕಮಗಳೂರಲ್ಲಿ ನಡೆದ ಪೆಟ್ರೋಲ್ ಬಾಂಬ್ ದಾಳಿ ಬಗ್ಗೆ ಪ್ರಸ್ತಾಪಿಸಿದ ಅವರು ಇಂತಹ ಕೇಸ್ ಗಳನ್ನು ಮುಚ್ಚುಹಾಕಿದ್ರು ಆಶ್ಚರ್ಯ ಪಡಬೇಕಿಲ್ಲ ಇದು ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯನವರ ಸ್ವಭಾವ ಎಂದಿದ್ದಾರೆ. ಕಾಂಗ್ರೆಸ್ ಮಾಡಿರುವ ಕೋಮು ದಳ್ಳುರಿ ಬಗ್ಗೆ ಕಿವಿಗೊಡುವುದು ಬೇಡ ಎಲ್ಲರೂ ರಾಮ ಭಜನೆ ಮಾಡಿ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g