ಕಾಂಗ್ರೆಸ್ ಸೇರ್ಪಡೆ ಅಪಪ್ರಚಾರ; ಶಾಸಕ ಎಂಪಿ.ಕುಮಾರಸ್ವಾಮಿ ಆಕ್ರೋಶ
1 min readನಾನು ಸಚಿವನಾಗುವುದನ್ನು ತಡೆಯಲು ನಮ್ಮ ಪಕ್ಷದ ಕೆಲವರು ನನ್ನ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ.ನಾನು ಕಾಂಗ್ರೆಸ್ ಸೇರುತ್ತೇನೆ ಎಂದು ನನ್ನ ವಿರುದ್ಧ ನಮ್ಮ ಪಕ್ಷದಲ್ಲೇ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ.ಎಂದು ಸ್ವಪಕ್ಷೀಯ ಮುಖಂಡರ ವಿರುದ್ಧವೇ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಇತ್ತೀಚೆಗೆ ನಾನು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಆಗುತಿದ್ದೇನೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ನಮ್ಮ ಬಿಜೆಪಿ ಪಕ್ಷದಲ್ಲೇ ಇರುವ ಕೆಲವರು ಇಂತಹ ಸುದ್ದಿಯನ್ನು ಹರಿಬಿಡುತ್ತಿದ್ದಾರೆ. ರಾಜ್ಯ ಸಚಿವ ಸಂಪುಟ ಪುನರ್ ರಚನೆ ಸಮಯಕ್ಕೆ ಸರಿಯಾಗಿ ನಾನು ಕಾಂಗ್ರೆಸ್ ಸೇರುತ್ತಿದ್ದೇನೆ ಎನ್ನುವ ಸುದ್ದಿ ಹರಡುತ್ತಿದ್ದಾರೆ. ಈ ರೀತಿಯ ಅಪಪ್ರಚಾರಗಳಿಂದ ಅವರು ಏನನ್ನು ಸಾಧಿಸಲು ಹೊರಟಿದ್ದಾರೆಯೋ ಗೊತ್ತಿಲ್ಲ. ನಾನು ಯಾವತ್ತಿಗೂ ನಿಗಮ ಮಂಡಳಿ, ಸಚಿವ ಸ್ಥಾನಕ್ಕೆ ಲಾಬಿ ಮಾಡಿಲ್ಲ. ಆದರೂ ಈ ರೀತಿ ಸುದ್ದಿ ಹೊರಬರುತ್ತಿದೆ. ನಾನ್ಯಾಕೆ ಕಾಂಗ್ರೆಸ್ ಪಕ್ಷ ಸೇರಲಿ, ನಾನೊಬ್ಬ ಬಿಜೆಪಿಯ ನಿಷ್ಟಾವಂತ ಕಾರ್ಯಕರ್ತ.
ಬಿಜೆಪಿ ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಮುಖಂಡರು ನನ್ನನ್ನ ಚೆನ್ನಾಗಿ ನೋಡಿಕೊಂಡಿದ್ದಾರೆ. ನಾನು ಕಾಂಗ್ರೆಸ್ ಸೇರುವುದು ಸುಳ್ಳು ಸುದ್ದಿ. ಇದನ್ನ ಯಾರೂ ನಂಬುವುದಿಲ್ಲ. ಇನ್ನಾದರು ನಮ್ಮ ಪಕ್ಷದ ಕೆಲವರು ನನ್ನ ವಿರುದ್ಧ ಅಪಪ್ರಚಾರ ನಡೆಸುವುದನ್ನು ಬಿಡಲಿ ಎಂದು ಶಾಸಕ ಎಂಪಿ ಕುಮಾರ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g