ನಗರದಲ್ಲಿ ಕಾಂಗ್ರೆಸ್ ಮುಖಂಡ ನಲಪಾಡ್ ಭರ್ಜರಿ ಪ್ರಚಾರ
1 min read
ಚಿಕ್ಕಮಗಳೂರು: ನಗರಸಭೆ ಚುನಾವಣೆಗೆ ದಿನಾಂಕ ಹತ್ತಿರವಾಗುತ್ತಿದ್ದು ನಗರಸಭೆ ಗದ್ದುಗೆ ಹಿಡಿಯಲು ಕಾಂಗ್ರೆಸ್ ಹಾಗೂ ಬಿಜೆಪಿ ತೀವ್ರ ಕಸರತ್ತು ನಡೆಸಿದ್ದು ನಗರದಲ್ಲಿ ಬೀಡು ಬಿಟ್ಟ ಘಟಾನುಘಟಿ ನಾಯಕರು ಪೈಪೋಟಿಯಲ್ಲಿ ಪ್ರಚಾರಕ್ಕೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಶುಕ್ರವಾರ ವಾರ್ಡ್ ನಂ 19 ರ ಕಾಂಗ್ರೆಸ್ ಅಭ್ಯರ್ಥಿ ಶಾದಾಬ್ ಆಲಂ ಖಾನ್ ಪರ ಕಾಂಗ್ರೆಸ್ ಯುವ ಮುಖಂಡ ನಲಪಾಡ್ ಭರ್ಜರಿ ಪ್ರಚಾರ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲೇ ಹೋದರು ಸಹ ಅಭಿವೃದ್ಧಿ ಕೆಲಸ ಆಗಿಲ್ಲ ಅದೇ ರೀತಿ ಚಿಕ್ಕಮಗಳೂರು ನಗರಸಭೆಯಲ್ಲಿ ಕಳೆದ 15 ವರ್ಷಗಳಿಂದ ಬಿಜೆಪಿ ಆಡಳಿತದಲ್ಲಿದ್ದು ಯಾವುದೇ ಅಭಿವೃದ್ಧಿ ಕಾರ್ಯವಾಗಿಲ್ಲ. ಜನರು ಎಲ್ಲಿ ಹೋದ್ರು ಸಹ ಮೂಲಭೂತ ಸಮಸ್ಯೆಗಳಾದ ರಸ್ತೆ, ನೀರು, ವಿದ್ಯುತ್ ಬಗ್ಗೆಯೇ ಸಮಸ್ಯೆಯ ಬಗ್ಗೆ ತಮ್ಮ ಕಷ್ಟವನ್ನು ಹೇಳಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜನರು ಬದಲಾವಣೆಯ ಚಿಂತನೆ ಮಾಡುತ್ತಿದ್ದು ಈ ಬಾರಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ಇದೇ ವೇಳೆ ಮಾತನಾಡಿದ ಅವರು ನಗರಸಭೆ ಚುನಾವಣೆಯ ಫಲಿತಾಂಶದ ದಿನ ಉತ್ತಮ ಫಲಿತಾಂಶ ಬರುತ್ತದೆ. ಜಿಲ್ಲಾ ಕಾಂಗ್ರೆಸ್ ಸಹ ಯುವಕರಿಗೆ ಆಧ್ಯತೆ ನೀಡಿದ್ದು ನಿಮ್ಮ ನಗರದ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲ ನೀಡುವಂತೆ ಮನವಿ ಮಾಡಿದರು.ಶಾಸಕ ಮಧು ಬಂಗಾರಪ್ಪ ಸಹ ಮತಯಾಚನೆಯನ್ನು ಮನೆ ಮನೆಗೆ ತೆರಳಿ ಮತಯಾಚನೆ ಮಾಡಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.
ವಾರ್ಡ್ ನಂ 19ರ ಕಾಂಗ್ರೆಸ್ ಅಭ್ಯರ್ಥಿ ಶಾದಾಬ್ ಆಲಮ್ ಖಾನ್ ಮಾತನಾಡಿ, ಕಳೆದ ಹಲವು ವರ್ಷಗಳಿಂದ ನಗರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ನನಗೆ ಮತದಾರರು ಆರ್ಶೀವಾದ ಮಾಡಿದರೆ ಉತ್ತಮ ಕೆಲಸ ಮಾಡಿ ತೋರಿಸುತ್ತೇನೆ ಎಂದು ಹೇಳಿದರು. ಪ್ರಚಾರದ ವೇಳೆ ಯಶೋಧ ಬಿ, ತಾಹೀರ್, ರಾಹೀಲ್, ನಗೀನಾ, ಮಂಜೇಗೌಡ, ಹೆಚ್.ಇ ಪ್ರಕಾಶ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g