ಕಾಂಗ್ರೆಸ್ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆ
1 min readಚಿಕ್ಕಮಗಳೂರು-ಲಕ್ಯಾ ಹೋಬಳಿಯ ದೇವರಹಳ್ಳಿ ಗ್ರಾಮದ ಯುವಕರು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು.ಶಾಸಕ ಸಿ.ಟಿ.ರವಿ ಬಿಜೆಪಿ ಪಕ್ಷದ ಭಾವುಟವನ್ನು ನೀಡಿ ಮಾತನಾಡಿ ಬಿಜೆಪಿ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಯಾರೆ ಪಕ್ಷಕ್ಕೆ ಬಂದರು ಅವರ ನಿಷ್ಠೆ ಮತ್ತು ಪ್ರಾಮಾಣಿಕತೆಯನ್ನು ನೊಡಿ ಪಕ್ಷದಲ್ಲಿ ಜವಾಬ್ದಾರಿ ಸ್ಥಾನ ನೀಡಲಾಗುವುದು ಎಂದರು.ನಮ್ಮ ಪಕ್ಷದ ಹಿಂದುತ್ವದ ಸಿದ್ಧಾಂತ ಮತ್ತು ಆ ಭಾಗದಲ್ಲಿ ಆಗಿರುವಂತಹ ಅಭಿವೃದ್ಧಿಯ ಕೆಲಸವನ್ನು ಮೆಚ್ಚಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ ಎಂದರು.ಗ್ರಾಮದ ಯುವಕ ನಿಖಿಲ್ ಮಾತನಾಡಿ ಶಾಸಕ ಸಿ.ಟಿ.ರವಿ ರವರು ನಮ್ಮ ಗ್ರಾಮಕ್ಕೆ ಹೆಚ್ಚಿನ ಅನುದಾನ ನೀಡಿ ಕೆಲಸ ಮಾಡುತ್ತಿದ್ದಾರೆ, ನಮ್ಮ ಊರಿಗೆ ಬಸ್ ಸ್ಟಾಂಡ್ ಮತ್ತು ಸೇತುವೆ ಅವಶ್ಯಕವಾಗಿದ್ದು ಶಾಸಕರು ಮಾಡಿಕೊಡುವ ಭರವಸೆಯನ್ನು ನೀಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಲಕ್ಯಾ ಹೋಬಳಿ ಅಧ್ಯಕ್ಷ ಈಶ್ವರಪ್ಪ, ಮುಂಜುನಾಥ್, ಲೋಹಿತ್, ಉಮೇಶ್, ವಸಂತ್, ರವಿ, ಜೀವನ್, ಕಾರ್ತಿಕ್, ಸಿದ್ಧೇಶ್, ಮೊಗಣ್ಣಶೆಟ್ಟಿ, ಚಂದ್ರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g