May 9, 2024

MALNAD TV

HEART OF COFFEE CITY

ಕಾಂಗ್ರೆಸ್ ಶಾಸಕ ಬಾಲಕೃಷ್ಣ ಬೇಷರತ್ ಕ್ಷಮೆಯಾಚಿಸಬೇಕು : ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮರಡಪ್ಪ

1 min read

ಚಿಕ್ಕಮಗಳೂರು: ಕಾಂಗ್ರೆಸ್ ಶಾಸಕ ಬಾಲಕೃಷ್ಣ ದೇಶದ ಸೈನಿಕರನ್ನು ಅವಮಾನಿಸಿದ್ದು ಇದನ್ನು ಬಿಜೆಪಿ ಖಂಡಿಸುತ್ತದೆ, ಕೂಡಲೇ ಶಾಸಕ ಬಾಲಕೃಷ್ಣ ಬೇಷರತ್ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮರಡಪ್ಪ ಒತ್ತಾಯಿಸಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಪ್ರಧಾನಿ ಮೋದಿಯವರನ್ನು ಟೀಕಿಸುವ ಭರದಲ್ಲಿ ದೇಶದ ಸೈನಿಕರನ್ನು ಅವಮಾನಿಸಿರುವ ಶಾಸಕ ಬಾಲಕೃಷ್ಣ ಬಿಜೆಪಿಯನ್ನು ಬ್ರಿಟೀಷರಿಗೆ ಹೋಲಿಸಿರುವುದು ಹಾಸ್ಯಾಸ್ಪದ ಹಾಗೂ ನಾಚಿಕೆಗೇಡಿನ ಸಂಗತಿಯಾಗಿದೆ ಎಂದರು. ಇದೇ ವೇಳೆ ಮಾತನಾಡಿದ ಕಲ್ಮಡಪ್ಪ ದೇಶದಲ್ಲಿ ಕಾಂಗ್ರೆಸ್ ರಕ್ಷಣಾ ವ್ಯವಸ್ಥೆಗೆ ಹಣ ನೀಡದೆ ಖಜಾನೆ ಲೂಟಿ ಮಾಡುವಲ್ಲಿ ನಿರತವಾಗಿತ್ತು ಮೋದಿ ಪ್ರಧಾನಿಯಾದ ನಂತರ ರಕ್ಷಣಾ ವ್ಯವಸ್ಥೆ ಸೈನಿಕರ ಸಬಲೀಕರಣ ಆಗಿದೆ ಎಂದರು. ಮಾಜಿ ಶಾಸಕ ಸಿ.ಟಿ.ರವಿಗೆ ಜಿಲ್ಲಾ ಪಂಚಾಯ್ತಿ ಟಿಕೆಟ್ ಸಿಗುವುದಿಲ್ಲ ಎಂದಿದ್ದ ಕೆ.ಪಿ.ಸಿ.ಸಿ ವಕ್ತಾರ ಲಕ್ಷ್ಮಣ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮರಡಪ್ಪ ಲಕ್ಷ್ಮಣ್ ಅವರಿಗೆ ಸಿ.ಟಿ ರವಿ ಟೀಕಿಸುವ ಯಾವುದೇ ನೈತಿಕತೆ ಇಲ್ಲ ತಾಕತ್ತಿದ್ದರೆ ಅವರು ಯಾವುದೇ ಚುನಾವಣೆಯಲ್ಲಿ ನಿಂತು ಗೆಲ್ಲಲಿ ಎಂದು ಸವಾಲೆಸೆದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!