May 15, 2024

MALNAD TV

HEART OF COFFEE CITY

ಅಭಿವೃದ್ಧಿ ಸಹಿಸದೆ ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್‌ಪ್ರತಿಭಟನೆ : ವರಸಿದ್ಧಿ ವೇಣುಗೋಪಾಲ್

1 min read

ಚಿಕ್ಕಮಗಳೂರಿನಲ್ಲಿ ಎರಡು ವರ್ಷಗಳಿಂದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿಲ್ಲ ಎಂಬ ಕಾಂಗ್ರೆಸ್ ಪಕ್ಷದ ಹೇಳಿಕೆ ಸತ್ಯಕ್ಕೆ ದೂರವಾಗಿದೆ, ಈ ಎರಡು ವರ್ಷಗಳಲ್ಲಿ ಅಭಿವೃದ್ಧಿ ಕಾಮಗಾರಿ ನಿಲ್ಲದೆ ನಡೆಯುತ್ತಿದೆ ಇದನ್ನು ಸಹಿಸದೆ ಕಾಂಗ್ರೆಸ್ ಪಕ್ಷದ ಮುಖಂಡರು ಪ್ರತಿಭಟನೆಯ ನಾಟಕವಾಡುತ್ತಿದ್ದಾರೆ ಎಂದು ಬಿ.ಜೆ.ಪಿ. ಪಕ್ಷದ ಜಿಲ್ಲಾ ವಕ್ತಾರರಾದ ವರಸಿದ್ಧಿ ವೇಣುಗೋಪಾಲ್ ಹೇಳಿದರು.
ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು ನಗರ ಸಭೆ ವ್ಯಾಪ್ತಿಯಲ್ಲಿ 2 ವರ್ಷಗಳಿಂದ 34 ಕೋಟಿ ರೂಪಾಯಿಯ ವಿವಿಧ ಕಾಮಗಾರಿಗಳು ನಡೆಯುತ್ತಿದೆ. ಈ ಕಾಮಗಾರಿಗಳೆಲ್ಲ ಮುಗಿಯುವ ಹಂತಕ್ಕೆ ಬಂದಿದೆ. ಅಭಿವೃದ್ಧಿಯಿಂದ ಕಂಗೆಟ್ಟಿರುವ ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ನಗರ ಸಭೆ ಚುನಾವಣೆಗೆ ನಿಲಲ್ಲು ಅಭ್ಯರ್ಥಿಗಳೆ ಇಲ್ಲದಂತಾಗಿದೆ. ಇನ್ನೇನೂ ಒಂದು ತಿಂಗಳಲ್ಲಿ ಚುನಾವಣೆ ಘೋಷಣೆಯಾಗಬಹುದೆಂದು ಕಾಂಗ್ರೆಸ್ ಪಕ್ಷ ಪ್ರತಿಭಟನೆಯ ನಾಟಕವಾಡುತ್ತಿದೆ. ಬಿ.ಜೆ.ಪಿ. ಪಕ್ಷದ ಬಗ್ಗೆ ಜನರಲ್ಲಿ ಒಲವು ಇದ್ದು ಮುಂದಿನ ಚುನಾವಣೆಯಲ್ಲಿ ಚಿಕ್ಕಮಗಳೂರು ನಗರಸಭೆಯ ಚುಕ್ಕಾಣಿಯನ್ನು ಬಿ.ಜೆ.ಪಿ. ಪಕ್ಷ ಹಿಡಿಯಲಿದೆ ಎಂದು ಆಶಾಭಾವನೆ ವ್ಯಕ್ತಪಡಿಸಿದರು.
ಸುದ್ಧಿಗೋಷ್ಠಿಯಲ್ಲಿ ಬಿ.ಜೆ.ಪಿ. ನಗರಾಧ್ಯಕ್ಷ ಮಧುಕುಮಾರ್ ರಾಜ್ ಅರಸ್ ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!