May 2, 2024

MALNAD TV

HEART OF COFFEE CITY

ವಿವಾದಗಳಿಂದ ಚುನಾವಣೆಗೆ ಹೋಗುವ ಹುನ್ನಾರ : ರಾಧಕೃಷ್ಣ

1 min read

ಚಿಕ್ಕಮಗಳೂರು : ಬಿಜೆಪಿ ಸರ್ಕಾರ ಉತ್ತಮ ಆಡಳಿತ ನೀಡುವ ಬದಲು ವಿವಾದಗಳನ್ನು ಇಟ್ಟುಕೊಂಡು ಚುನಾವಣೆಗೆ ಹೋಗುವ ಹುನ್ನಾರ ನಡೆಸಿದಂತೆ ಕಾಣುತ್ತಿದೆ ಎಂದು ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷ ರಾಧಕೃಷ್ಣ ಆರೋಪಿಸಿದರು.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ ಹತ್ಯೆಯ ಆರೋಪಿಗಳನ್ನು ಬಂಧಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಅಮೀರ್ ಅಹಮ್ಮದ್ ವೃತ್ತದಲ್ಲಿ ಸಾರ್ವಕರು ಪ್ಲೆಕ್ಸ್ ಹಾಕಿ ಗಲಭೆಗೆ ಕಾರಣರಾದ ಬಜರಂಗದಳ ಮುಖಂಡರು ಮತ್ತು ಕಾರ್ಯಕರ್ತರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಹೇಳಿದರು. ಕಾಂಗ್ರೆಸೇತರ ಸರ್ಕಾರವಿರುವ ರಾಜ್ಯಗಳಲ್ಲಿ ದಲತರ ಮೇಲೆ ಹಲ್ಲೆ ನಡೆದರೆ ತಕ್ಷಣ ಪ್ರತಿಕ್ರಿಸುವ ಕಾಂಗ್ರೆಸ್‍ನ ಹಂಗಾಮಿ ಅಧ್ಯಕ್ಷೆ ಸೋನಿಯಾಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿದ್ದರಾಮಯ್ಯ ತಮ್ಮದೆ ಕಾಂಗ್ರೆಸ್ ಸರ್ಕಾರವಿರುವ ರಾಜಸ್ಥಾನದಲ್ಲಿ ಶಿಕ್ಷಕನ ಹಲ್ಲೆಯಿಂದ ಮೃತನಾದ ವಿದ್ಯಾರ್ಥಿ ಘಟನೆಯ ಬಗ್ಗೆ ಮೌನವಾಗಿರವುದು ಖಂಡನೀಯ ಎಂದು ಹೇಳಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!