May 9, 2024

MALNAD TV

HEART OF COFFEE CITY

ಹೊಸ ವರ್ಷಾಚರಣೆಗೆ ಕೊರೊನಾ ನಿಯಮ ಅನ್ವಯ_ಕೆ.ಎನ್ ರಮೇಶ್

1 min read

ಚಿಕ್ಕಮಗಳೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಜಿಲ್ಲೆಗೆ ಪ್ರವಾಸಿಗರ ದಂಡು ಹರಿದು ಬರಲಿದ್ದು ರಾಜ್ಯ ಸರ್ಕಾರದ ಆದೇಶದ ಮೇರೆಗೆ ಜಿಲ್ಲಾಡಳಿತವೂ ಕೂಡ ಒಂದಷ್ಟು ಸೂಕ್ತ ಕ್ರಮಗಳನ್ನು ತಗೆದುಕೊಂಡಿದ್ದು ಡಿ.30 ರಿಂದ ಜ.2 ರ ವರೆಗೆ ಹೋಂ, ಸ್ಟೇ ರೆಸಾರ್ಟ್‍ಗಳಲ್ಲಿ ತಮ್ಮ ಸಾಮಥ್ರ್ಯದ ಶೇ. 50 ರಷ್ಟು ಜನರಿಗೆ ಮಾತ್ರ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಅವರು, ಹೊಸವರ್ಷದ ಸಂದರ್ಭದಲ್ಲಿ ಜಿಲ್ಲೆಯ ಹೊಟೇಲ್, ರೆಸ್ಟೋರೆಂಟ್, ಪಬ್, ಬಾರ್‍ಗಳಲ್ಲಿ ಸಿಮೀತವಾಗಿ ಶೇ.50ರಷ್ಟು ಮಾತ್ರ ಮೀಸಲಾಗಿಡಬೇಕು ಹಾಗೂ ಜೊತೆಗೆ ಕೊರೊನಾ ಪರೀಕ್ಷೆಯ ನೆಗೆಟೀವ್ ವರದಿ ಮತ್ತು ಎರಡು ಡೋಸ್ ಕೊರೊನಾ ವ್ಯಾಕ್ಸಿನ್ ಪಡೆದಿರುವ ಬಗ್ಗೆಯೂ ಮಾಹಿತಿಯನ್ನು ಕಡ್ಡಾಯವಾಗಿ ಪಡೆಯಬೇಕು ಎಂದು ತಿಳಿಸಿದ ಅವರು ಸಂಬಂಧಪಟ್ಟವರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು

ರಾಜ್ಯ ಸರ್ಕಾರದ ಆದೇಶದಂತೆ ಈಗಾಗಲೇ ಜಿಲ್ಲೆಯಲ್ಲಿ ನೈಟ್ ಕಫ್ರ್ಯೂ ಜಾರಿಗೆ ತರಲಾಗಿದ್ದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯ ವರೆಗೆ ಸಾರ್ವಜನಿಕರಿಗೆ ತಿರುಗಾಡಲು ಕಟ್ಟುನಿಟ್ಟಿನ ನಿರ್ಬಂಧ ಏರಲಾಗಿದೆ. ರಾತ್ರಿ ವೇಳೆಯಲ್ಲಿ ಕೈಗಾರಿಕೆ, ಕಂಪನಿಗಳು ಗುರುತಿನ ಚೀಟಿಯನ್ನು ತೋರಿಸಿ ಓಡಾಡಬಹುದು, ದೂರಾವಾಣಿ, ಅಂತರ್ಜಾಲ, ಮೆಡಿಕಲ್, ಆರೋಗ್ಯ ಸೇವೆಗಳಲ್ಲಿ ಕಾರ್ಯನಿರ್ವಹಿಸುವ ವ್ಯಕ್ತಿಗಳು ಸರಕು ಸಾಗಾಣೆಗಳ ಓಡಾಟಕ್ಕೆ ಯಾವುದೇ ನಿರ್ಬಂಧ ಇಲ್ಲ ಎಂದು ಹೇಳಿದ ಅವರು ಉಳಿದಂತೆ ರಾತ್ರಿ ವೇಳೆ ಬಸ್, ರೈಲು, ವಿಮಾನ ಇನ್ನೀತರ ಸಾರ್ವಜನಿಕ ಸಾರಿಗೆ ವಾಹನದಲ್ಲಿ ಸಾಗುವವರು ಪ್ರಯಾಣದ ಸೂಕ್ತ ದಾಖಲೆಗಳನ್ನು ತೋರಿಸಿ ಓಡಾಡಲು ಯಾವುದೇ ತೊಂದರೆ ಉಳಿದಂತೆ ಕೋವಿಡ್ ಎರಡನೇ ಅಲೆಯಲ್ಲಿ ಇದ್ದಂತಹ ರಾತ್ರಿ ಕಫ್ರ್ಯೂಅನ್ನು ಯಥಾವತ್ತಾಗಿ ಜಾರಿಗೆ ತರಲಾಗಿದೆ ಎಂದು ಹೇಳಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!