May 14, 2024

MALNAD TV

HEART OF COFFEE CITY

ಭ್ರಷ್ಟಾಚಾರ ಕಾಂಗ್ರೆಸ್ನ ರಾಜಕೀಯ ವ್ಯವಸ್ಥೆಯ ಒಂದು ಭಾಗ : ಶಾಸಕ ಸಿ.ಟಿ.ರವಿ

1 min read

ಚಿಕ್ಕಮಗಳೂರು : ಕಾಂಗ್ರೆಸ್‍ನಲ್ಲಿ ಪ್ರಮೋಷನ್ ಸಿಗಬೇಕು ಅಂದ್ರೆ ಜೈಲಿಗೆ ಹೋಗಬೇಕು,  ಕಾಂಗ್ರೆಸ್‍ನಲ್ಲಿ ಪ್ರಮೋಷನ್ ಸಿಗಬೇಕು ಅಂದ್ರೆ ಭ್ರಷ್ಟಾಚಾರ ಮಾಡಬೇಕು ಎಂದು ಕಾಂಗ್ರೆಸ್ ವಿರುದ್ಧ ಶಾಸಕ ಸಿ.ಟಿ.ರವಿ ವ್ಯಂಗ್ಯ ವಾಡಿದ್ದಾರೆ.

ವಿನಯ್ ಕುಲಕರ್ಣಿ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿನಯ್ ಕುಲಕರ್ಣಿ ಈಗ ನಿರಪರಾಧಿಯ, ಅಪರಾಧಿಯೂ ಅಲ್ಲ, ಆಪಾದಿತ, ಭ್ರಷ್ಟಾಚಾರ ಕಾಂಗ್ರೆಸ್‍ನ ರಾಜಕೀಯ ವ್ಯವಸ್ಥೆಯ ಒಂದು ಭಾಗ, ಅಲ್ಲಿ ಗುಂಡಾಗಿರಿ ಪ್ರಮೋಷನ್‍ಗೆ ಇರೋ ಒಂದು ಮಾದರಿ ಎಂದು ಹೇಳಿದರಲ್ಲದೆ ಡಿಕೆಶಿ ಅವರು ಬೆಳೆದ ಬಂದ ರೀತಿಯಲ್ಲೇ ಆಲೋಚನೆ ಮಾಡುತ್ತಿದ್ದಾರೆ. ಹಿಂದೆ ರಾಜೀವ್ ಗಾಂಧಿ ಅವರು ನನ್ನ ಮೇಲೆ ಗೂಂಡಾ ಅಂತ ಬಂದಾಗ, ಗೂಂಡಾಗಳಿಗೆ ನಾವು ವಿಶೇಷವಾದ ಆಧ್ಯತೆ ಕೊಡಬೇಕೆಂದು ಅವರೇ ಹೇಳಿದ್ದಾರೆ, ಉಳಿದವರು ಕಾಂಗ್ರೆಸ್ ಬಗ್ಗೆ ಯೋಚನೆ ಮಾಡಬೇಕಾಗಿದೆ, ಅದನ್ನ ಅವರೇ ಒಪ್ಪಿದ್ದಾರೆ, ಮುಂದೆ ಜನ ಕಾಂಗ್ರೆಸ್ ಬಗ್ಗೆ ಎಚ್ಚರ ವಹಿಸಬೇಕಿದೆ ಎಂದು ವ್ಯಂಗ್ಯವಾಡಿದರು

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!