May 8, 2024

MALNAD TV

HEART OF COFFEE CITY

ಕೋವಿಡ್ ಹೊಸ ರೂಪಾಂತರಿ JN.1 ರಾಜ್ಯದಲ್ಲಿ ಆತಂಕ ಪಡುವ ಮಟ್ಟದಲ್ಲಿಲ್ಲ: ಡಾ. ಜಿ ಪರಮೇಶ್ವರ್

1 min read

ಚಿಕ್ಕಮಗಳೂರು: ರಾಜ್ಯದಲ್ಲಿ ಕೋವಿಡ್ ಹೊಸ ರೂಪಾಂತರಿ JN.1 ಆತಂಕ ಪಡುವ ಮಟ್ಟದಲ್ಲ ಆದರೂ ಹೊಸ ವರ್ಷ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು ಬೆಳಗಾವಿ ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣದಲ್ಲಿ ಭಾರತೀಯ ಜನತಾ ಪಾರ್ಟಿ ರಾಜಕೀಯ ಮಾಡ್ತಾ ಇದ್ದಾರೆ. ಜನ ಸಮುದಾಯ ಕೂಡ ನಾವು ತೆಗೆದುಕೊಂಡ ಕ್ರಮದ ಬಗ್ಗೆ ಪ್ರಶಂಸೆ ಮಾಡಿದ್ದಾರೆ. ಅಲ್ಲದೆ ಕೋರ್ಟ್ ಕೂಡ ಪ್ರಶಂಸಿದೆ ಎಂದ ಪರಮೇಶ್ವರ್, ರಾಜಕೀಯ ಅಸ್ತ್ರವಾಗಿ ಭಾರತೀಯ ಜನತಾ ಪಾರ್ಟಿ ಇದನ್ನ ಉಪಯೋಗಿಸಲು ಹೊರಟಿದ್ದಾರೆ. ಆದರೆ ಅವರೇನು ಯಶಸ್ವಿ ಆಗುವುದಿಲ್ಲ ಎಂದರು.ರಾಜ್ಯದಲ್ಲಿ ಕೊರೊನಾ ಗಂಭೀರವಾಗಿ ಇನ್ನೂ ಹಬ್ಬಿಲ್ಲ ಆದರೂ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಸರ್ಕಾರ ಈ ಸಂಬಂಧ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ. 

ಇದೇ ವೇಳೆ ಮಾತನಾಡಿದ ಅವರು ನ್ಯೂ ಇಯರ್ ಆಚರಣೆ ಹಿನ್ನೆಲೆ ಸಭೆ ಕರೆದಿದ್ದೇವೆ, ಇಲಾಖೆಯಲ್ಲಿನ ಹಿರಿಯ ಅಧಿಕಾರಿಗಳು ಸೇರಿ ಸಭೆ ಮಾಡಿದ್ದು, ಆಚರಣೆ ಬಗ್ಗೆ ಇನ್ನೂ ಸರ್ಕಾರದಿಂದ ಯಾವ ನಿರ್ದೇಶನಗಳು ಮಾಡಿಲ್ಲ, ಕೊವಿಡ್ ಹಿನ್ನೆಲೆ ಮಾಸ್ಕ್ ಧರಿಸುವುದು ಹೆಚ್ಚು ಜನ ಸಭೆ ಸೇರದಂತೆ ಇನ್ನಿತರ ಮುಂಜಾಗ್ರತಾ ಕೈಗೊಳ್ಳಲಾಗುವುದು ಎಂದರು. ಕೇರಳದಲ್ಲಿ ಕಾಣಿಸಿಕೊಂಡಿರುವ ರೂಪಾಂತರ ಕೋವಿಡ್ ತಳಿಯ ಬಗ್ಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಕರ್ನಾಟಕದಲ್ಲಿ ಹೆಚ್ಚಾಗಿ ಪ್ರಕರಣಗಳು ಕಂಡು ಬಂದಿಲ್ಲ. ಹೆಚ್ಚು ಪ್ರಕರಣಗಳು ಕಂಡು ಬಂದಲ್ಲಿ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತದೆ, ಅಲ್ಲಿಯವರೆಗೆ ಮಾಧ್ಯಮಗಳ ಸಹಕಾರ ಮುಖ್ಯ. ಯಾವುದೇ ತೊಂದರೆಗಳಾಗದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದರು. ನಿಗಮ ಮಂಡಳಿಗಳಿಗೆ ನೇಮಕದ ಬಗ್ಗೆ ತಿಳಿಸಿದ ಗೃಹ ಸಚಿವರು ನೇಮಕಕ್ಕೆ ಯಾರಾದರೂ ಸಮಯ ನಿಗದಿ ಮಾಡಿದ್ದೀರಾ ಎಂದು ಪ್ರಶ್ನೆ ಮಾಡಿದರು. ನಮ್ಮ ಪಕ್ಷದ ಅಧ್ಯಕ್ಷರು ಮುಖ್ಯಮಂತ್ರಿಗಳು ದೆಹಲಿಗೆ ತೆರಳಿದ್ದು, ಅವರು ತೀರ್ಮಾನ ಮಾಡಿ ಹೈಕಮಾಂಡ್ ಜೊತೆ ಚರ್ಚೆ ಮಾಡಿ ತಿಳಿಸುತ್ತಾರೆ ಎಂದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!