May 3, 2024

MALNAD TV

HEART OF COFFEE CITY

ಹುಲಿ ದಾಳಿಗೆ ಹಸು ಬಲಿ, ಸ್ಥಳಿಯರಲ್ಲಿ ಆತಂಕ

1 min read

 

 

 ಮೇಯಲು ಹೋಗಿದ್ದ ಹಸುವಿನ ಮೇಲೆ ಹುಲಿ ದಾಳಿ ಮಾಡಿದ್ದು, ಹುಲಿ ದಾಳಿಗೆ ಹಸು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ-ದತ್ತಪೀಠ ಮಾರ್ಗದ ಅತ್ತಿಗುಂಡಿ ಬಳಿ ನಡೆದಿದೆ. ದತ್ತಪೀಠ-ಮುಳ್ಳಯ್ಯನಗಿರಿ ಮಾರ್ಗದಲ್ಲಿ ಹುಲಿ ದಾಳಿ ಮಾಡಿರುವುದರಿಂದ ಈ ಮಾರ್ಗದಲ್ಲಿ ಓಡಾಡುವ ಜನಸಾಮಾನ್ಯರು ಹಾಗೂ ಪ್ರವಾಸಿಗರು ಆತಂಕಕ್ಕೀಡಾಗಿದ್ದಾರೆ. ನಿತ್ಯ ದತ್ತಪೀಠ ಹಾಗೂ ಮುಳ್ಳಯ್ಯನಗಿರಿ ಮಾರ್ಗದಲ್ಲಿ ನೂರಾರು ವಾಹನಗಳಲ್ಲಿ ಸಾವಿರಾರು ಪ್ರವಾಸಿಗರು ಸಂಚಾರ ಮಾಡುತ್ತಾರೆ. ಬೈಕಿನಲ್ಲೂ ಹೆಚ್ಚು ಪ್ರವಾಸಿಗುರ ಓಡಾಡುತ್ತಾರೆ. ಈ ಮಾರ್ಗದಲ್ಲಿ ಹಲವು ಹಳ್ಳಿಗಳು ಇದ್ದು ಅಲ್ಲಿನ ಜನ ಪ್ರತಿಯೊಂದಕ್ಕೂ ಚಿಕ್ಕಮಗಳೂರು ನಗರಕ್ಕೆ ಬರಬೇಕು. ಈ ಮಾರ್ಗದಲ್ಲಿ ಹಸು ಮೇಲೆ ದಾಳಿ ಮಾಡಿರುವುದು ಸ್ಥಳಿಯರು ಹಾಗೂ ಪ್ರವಾಸಿಗರಿಗೆ ಆತಂಕ ಸೃಷ್ಠಿಸಿದೆ.

ಇನ್ನು ಮೂಡಿಗೆರೆ ತಾಲೂಕಿನಲ್ಲೂ ಎತ್ತಿನ ಮೇಲೆ ಹುಲಿ ದಾಳಿ ಮಾಡಿದೆ. ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ದೊಡ್ಡನಂದಿ-ಬೊಮ್ಮನಹಳ್ಳಿ ಬಳಿ ಮೇಯಲು ಹೋಗಿದ್ದ ಎತ್ತಿನ ಮೇಲೆ ಹುಲಿ ದಾಳಿ ಮಾಡಿದ್ದು ಸ್ಥಳಿಯರಲ್ಲಿ ಆತಂಕ ಸೃಷ್ಠಿಯಾಗಿದೆ. ನಾರಾಯಣ ಗೌಡ ಎಂಬುವರು ಸಾಕಿದ್ದ ಎತ್ತಿನ ಮೇಲೆ ಹಸು ದಾಳಿ ಮಾಡಿದೆ. ಅರಣ್ಯ ಇಲಾಖೆ ಕೂಡಲೇ ಹುಲಿಯನ್ನ ಸೆರೆ ಹಿಡಿದು ಸ್ಥಳಾಂತರಿಸಬೇಕೆಂದು ಸ್ಥಳಿಯರು ಆಗ್ರಹಿಸಿದ್ದಾರೆ. ಮೂಡಿಗೆರೆ ತಾಲೂಕಿನಲ್ಲಿ ಹುಲಿ ದಾಳಿಯ ಪ್ರಕರಣಗಳು ಆಗಿದ್ದಾಗ್ಗೆ ನಡೆಯುತ್ತಲೇ ಇರುತ್ತೆ. ಈಗಾಗಲೇ 30ಕ್ಕೂ ಹೆಚ್ಚು ರಾಸುಗಳು ಹುಲಿ ದಾಳಿಗೆ ಬಲಿಯಾಗಿವೆ. ಜನ ಮನೆಯಿಂದ ಹೊರಬರೋದಕ್ಕೂ ಆತಂಕಪಡುವ ಸನ್ನಿವೇಶ ನಿರ್ಮಾಣವಾಗಿದೆ. ಹಾಗಾಗಿ, ಸ್ಥಳಿಯರು ಹುಲಿಯನ್ನ ಸೆರೆ ಹಡಿಯುವಂತೆ ಆಗ್ರಹಿಸಿದ್ದಾರೆ. ಸ್ಥಳಕ್ಕೆ ವಲಯ ಉಪ ಅರಣ್ಯಾಧಿಕಾರಿ ಉಮೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!