ಕೆರೆಯ ಏರಿಯಲ್ಲಿ ಬಿರುಕು : ಆತಂಕದಲ್ಲಿ ಗ್ರಾಮಸ್ಥರು
1 min readಸಖರಾಯಪಟ್ಟಣ : ಜಿಲ್ಲೆಯಲ್ಲಿ ಆಗಮಿಸುತ್ತಿರುವ ಮಳೆಯಿಂದಾಗಿ ದಶಕಗಳ ಕಾಲ ಬರಗಾಲ ಎದುರಿಸಿದ ಬಯಲು ಸೀಮೆ ಭಾಗಗಳ ಒಂದೆಡೆ ಕೆರೆ ಕಟ್ಟೆಗಳು ತುಂಬಿ ರೈತರಲ್ಲಿ, ಸ್ಥಳೀಯ ಗ್ರಾಮಸ್ಥರಲ್ಲಿ ಹಬ್ಬದ ವಾತಾವರಣವನ್ನು ಉಂಟು ಮಾಡುತ್ತಿದ್ದರೆ, ಮತ್ತೊಂದೆಡೆ ಕೆರೆ ಏರಿಯಲ್ಲಿ ಬಿರುಕು ಕಾಣಿಸಿಕೊಂಡು ಸುತ್ತಮುತ್ತಲ ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಸಹ್ಯಾದ್ರಿ ಪರ್ವತ ಶ್ರೇಣಿಯ ಭಾಗವಾಗದ ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿರುವ ಕಾರಣ ಕಡೂರು ತಾಲೂಕಿನ ಐತಿಹಾಸಿಕ ಮದಗದ ಕೆರೆ ತುಂಬಿ ಕೋಡಿ ಬಿದ್ದು, ಸ್ಥಳೀಯ ಗ್ರಾಮಸ್ಥರಲ್ಲಿ ಸಂತೋಷಕ್ಕೆ ಕಾರಣವಾಗಿತ್ತು. ಆದರೆ ಅದೇ ಕೆರೆ ಇಂದು ಸಂತಸ ಪಟ್ಟ ಗ್ರಾಮಸ್ಥರ ಭಯಕ್ಕೆ ಕಾರಣವಾಗಿದೆ. ಐತಿಹಾಸಿಕ ಮದಗದ ಕೆರೆಯಲ್ಲಿ ಈ ಬಾರಿ ಹೆಚ್ಚಿನ ಪ್ರಮಾಣದ ನೀರಿನ ಒಳ ಹರಿವು ಆಗುತ್ತಿದ್ದು, ನೀರು ಹಾಯಿಸೋ ಬ್ಯಾರೇಜ್ ಬಳಿ ಹಾಗೂ ಕೆರೆ ಬಳಿಯ ಗುಡ್ಡದಲ್ಲೂ ಭೂಕುಸಿತ ಕಂಡು ಬಂದಿದ್ದು, ಏರಿಯಾ ಮಣ್ಣು ಕುಸಿಯುತ್ತಿದೆ. ಇದರಿಂದ ಅಪಾರ ಪ್ರಮಾಣದ ನೀರು ಹೊರಕ್ಕೆ ಹೋಗುತ್ತಿದೆ. ಏರಿ ಬಿರುಕು ಬಿಟ್ಟ ಬೆನ್ನಲ್ಲೇ ಸುತ್ತಮುತ್ತ ಗ್ರಾಮಗಳಲ್ಲಿ ಆತಂಕ ಎದುರಾಗಿದ್ದು ತುರ್ತು ಕ್ರಮ ಕೈಗೊಳ್ಳದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g