ಕ್ರಿಕೆಟ್ ಬೆಟ್ಟಿಂಗ್ ? : ಚಾಕು ಇರಿತ ಯುವಕ ಸಾವು
1 min read
ಚಿಕ್ಕಮಗಳೂರು: ಕ್ರಿಕೆಟ್ ಬೆಟ್ಟಿಂಗ್ ಹಣದ ವಿಚಾರವಾಗಿ ಎರಡು ಗುಂಪಿನ ನಡುವೆ ಗಲಾಟೆ ಉಂಟಾಗಿ ಯುವಕ ಕೊಲೆಯಾದ ಘಟನೆ ಚಿಕ್ಕಮಗಳೂರು ನಗರದ ಕೋಟೆ ಟ್ಯಾಂಕ್ ಬಳಿ ನಡೆದಿದೆ.ಗವನಹಳ್ಳಿ ಮೂಲದ ಧ್ರುವರಾಜ್ ಅರಸ್ (23) ಡ್ರ್ಯಾಗರ್ ಹಿರಿತಕ್ಕೆ ಒಳಗಾದ ಯುವಕನಾಗಿದ್ದು ವಸ್ತಾರೆ ಮೂಲದ ಆರೋಪಿ ಪ್ರಮೋದ್ ಪರಾರಿಯಾಗಿದ್ದಾನೆ.
ಸ್ಥಳಕ್ಕೆ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಘಟನೆಗೆ ಕ್ರಿಕೆಟ್ ಬೆಟ್ಟಿಂಗ್ ಕಾರಣ ಎನ್ನಲಾಗಿದ್ದು ಹಣದ ವ್ಯವಹಾರ ಮಾತನಾಡಲು ಕರೆಸಿಕೊಂಡು ಗುಂಪೊಂದು ಅಡ್ಡಗಟ್ಟಿ ಕೋಟೆ ಬಳಿಯ ದೊಡ್ಡ ಟ್ಯಾಂಕ್ ಬಳಿ ಕರೆದುಕೊಂಡು ಹೋಗಿ ಹಣ ವಸೂಲಿಗೆ ಮುಂದಾಗಿದ್ದು ಈ ವೇಳೆ ಪರಸ್ಪರ ಮಾತಿನ ಚಕಮಕಿ ಚಾಕುವಿನಿಂದ ಹಿರಿದು ಕೊಲೆ ಮಾಡಲಾಗಿದೆ ಎನ್ನಲಾಗಿದೆ
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g