May 7, 2024

MALNAD TV

HEART OF COFFEE CITY

ಮಾಜಿ ಶಾಸಕ ರಾಮ ಭಟ್ ಅವರ ನಿಧನಕ್ಕೆ ಸಿ.ಟಿ.ರವಿ ಸಂತಾಪ

1 min read

ಬೆಂಗಳೂರು : ಆರೆಸ್ಸೆಸ್ ಮುಂದಾಳು, ಜನಸಂಘ, ಬಿಜೆಪಿಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪುತ್ತೂರಿನ ಮಾಜಿ ಶಾಸಕ ಉರಿಮಜಲು ಕೆ. ರಾಮ ಭಟ್ ಅವರ ನಿಧನಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ.ರವಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಜನಸಂಘದ ಹಿರಿಯ ನಾಯಕ, ಮಾಜಿ ಶಾಸಕ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ರಾಜಕೀಯ ಭೀಷ್ಮ ಎಂದೇ ಗೌರವಿಸಲ್ಪಟ್ಟ ಉರಿಮಜಲು ಶ್ರೀ ರಾಮ ಭಟ್ ರವರು ಅಸ್ತಂಗತರಾದ ಸುದ್ದಿ ನೋವನ್ನು ತಂದಿದೆ.  ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತರಾಗಿದ್ದ ಶ್ರೀಯುತರು ತಮ್ಮ ನೇರ ನುಡಿ ನಡವಳಿಕೆಗೆ ಎಲ್ಲರಿಂದ ಗೌರವಿಸಲ್ಪಟ್ಟವರು. ಸತ್ಯಕ್ಕೆ ಬದ್ಧರಾಗಿ ತತ್ವಬದ್ದ ನಿಲುವನ್ನು ಸಾರಿದ ಹಿರಿಯ ಜೀವಕ್ಕೆ ಭಾವಪೂರ್ಣ ಶ್ರದ್ಧಾಂಜಲಿ ಸಮರ್ಪಿಸುವುದಾಗಿ ಸಿ.ಟಿ.ರವಿ ಅವರು ತಿಳಿಸಿದ್ದಾರೆ.

ಆರ್.ಎಸ್.ಎಸ್. ಮೂಲಕ ಪುತ್ತೂರನ್ನು ಹಿಂದುತ್ವದ ಭದ್ರಕೋಟೆ ಮಾಡಲು ಅಡಿಪಾಯ ಹಾಕಿದ್ದವರು. ಜನಸಂಘದ ಹಾಗೂ ಬಿ.ಜೆ.ಪಿಯ ಪ್ರಭಾವಿ ನಾಯಕರಾಗಿ ಪಕ್ಷವನ್ನು ಭದ್ರವಾಗಿ ಬೆಳೆಸಿದವರು, ವಕೀಲರಾಗಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮೊಕ್ತೇಸರರಾಗಿ,  ಪುತ್ತೂರು ಪುರಸಭೆಯ ಅಧ್ಯಕ್ಷರಾಗಿ, ಕ್ಯಾಂಪ್ಕೋ ಅಧ್ಯಕ್ಷರಾಗಿ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ, ವಿದ್ಯಾಸಂಸ್ಥೆಗಳ ನಿರ್ಮಾತೃವಾಗಿ, ಪುತ್ತೂರಿನ ಶಾಸಕರಾಗಿ, ಭಾರತೀಯ ಜನತಾ ಪಾರ್ಟಿಯ ಮುಂಚೂಣಿಯ ಮುಖಂಡರಾಗಿ ರಾಮ ಭಟ್ ಅವರು ವಿವಿಧ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು. ರಾಮ ಭಟ್ಟರು ತುರ್ತು ಪರಿಸ್ಥಿತಿ ವಿರೋಧಿಸಿ ಹೋರಾಟ ನಡೆಸಿ ಜೈಲು ಸೇರಿದ್ದರು ಎಂದು ಅವರು ತಿಳಿಸಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಕಾರ್ಯ ನಿರ್ವಹಿಸಿದ್ದ ರಾಮ ಭಟ್‍ರವರು ಬಿಜೆಪಿಯ ಭೀಷ್ಮ ಎಂದೇ ಜನಜನಿತವಾಗಿದ್ದವರು ಎಂದು ಸ್ಮರಿಸಿದ್ದಾರೆ.

ಮೃತರ ಕುಟುಂಬ, ಅಭಿಮಾನಿಗಳಿಗೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಪರಮಾತ್ಮನು ಕರುಣಿಸಲಿ ಎಂದು ಸಿ.ಟಿ. ಅವರು ಪ್ರಾರ್ಥಿಸಿದ್ದಾರೆ.

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!