ರೇಣುಕಾಚಾರ್ಯ ಮಾತಿಗೆ ಸಿ.ಟಿ ರವಿ ಮೌನ
1 min read
ಚಿಕ್ಕಮಗಳೂರು: ಎಂ.ಪಿ. ರೇಣುಕಾಚಾರ್ಯ ಹೇಳಿಕೆ ಹಿನ್ನೆಲೆ ಎಲ್ಲರ ಹೇಳಿಕೆಗೆ ಪ್ರತಿಕ್ರಿಯೇ ನೀಡಲು ನಾನು ಇದ್ದೀನಾ…? ಸಿ.ಟಿ.ರವಿ ಎಂದು ಪ್ರಶ್ನೆ ಮಾಡಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಪ್ರವಾಸ ಮಾಡುವೆ ಎಂಬ ರೇಣುಕಾಚಾರ್ಯ ಹೇಳಿಕೆಗೆ ಸಿ.ಟಿ.ರವಿ ಮೌನ ತಾಳಿದ್ದಾರೆ.ನಾನೇನ್ ಹೇಳ್ಳಿ, ನಾನ್ ಏನ್ ಹೇಳೋಕೆ ಆಗುತ್ತೆ. ಅದು ಅವರ ಭಾವನೆ, ಅವರು ಹೇಳಿದ್ದಾರೆ ಎಂದ ಅವರುರಾಜ್ಯ ಸುತ್ತಬಹುದು, ಸುತ್ತುವ ಸಾಮರ್ಥ್ಯ ಇದೆ, ಸುತ್ಲಿ ಎಂದು ಸಿ.ಟಿ.ರವಿ ಹೇಳಿದ್ದಾರೆ.
ಕೇಂದ್ರದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬರುವುದು ನಮ್ಮ ಗುರಿ; ಸಿ.ಟಿ ರವಿ
ಚಿಕ್ಕಮಗಳೂರು: ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಹಿನ್ನೆಲೆ ಪದಗ್ರಹಣ ಕಾರ್ಯಕ್ರಮಕ್ಕೆ ನಾನು ಹೋಗಲ್ಲ ಎಂದು ಮಾಜಿ ಶಾಸಕ ಸಿ ಟಿ ರವಿ ಹೇಳಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ನನ್ನ ಜೊತೆ 2 ಬಾರಿ ಫೋನ್ ನಲ್ಲಿ ಮಾತನಾಡಿದ್ದಾರೆ. 15ನೇ ತಾರೀಖು ಜವಾಬ್ದಾರಿ ಸ್ವೀಕಾರ ಮಾಡ್ತಿದ್ದಾರೆ. ಆದರೆ 15ರ ರಾತ್ರಿವರೆಗೂ ಮಧ್ಯಪ್ರದೇಶದಲ್ಲಿ ಚುನಾವಣಾ ಕ್ಯಾಂಪೇನ್ ಇರುವ ಹಿನ್ನಲೆ15ಕ್ಕೆ ನಾನು ಇರಲ್ಲ ಅಂತ ಹೇಳಿದ್ದೇನೆ ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಶಾಸಕ ಸಿ.ಟಿ.ರವಿ ಹೇಳಿದ್ದಾರೆ.ನಾವು ಪಕ್ಷದ ಲಕ್ಷ್ಮಣ ರೇಖೆಯನ್ನ ಯಾವತ್ತು ದಾಟಿದ್ದೀವಿ, 20 ವರ್ಷ ಶಾಸಕನಾಗಿ, 35 ವರ್ಷ ಕಾರ್ಯಕರ್ತನಾಗಿ ಪಕ್ಷದ ಲಕ್ಷ್ಮಣ ರೇಖೆ ಯಾವತ್ತು ದಾಟಿದ್ದೀವಿ ಎಂದು ಪ್ರಶ್ನೆ ಮಾಡಿದರು.ಜಗಳ ಆಡಿದ್ದರೂ ನಮ್ಮ ಮನೆ ಒಳಗೆ ಜಗಳ ಆಡಿದ್ದೇನೆ. ಹೊಸಿಲು ದಾಟಿ ಬೇರೆಯವರ ಮನೆಗೆ ಹೋಗಿ ಕೂತು ನಮ್ಮ ಮನೆ ಸಮಸ್ಯೆ ಬಗೆಹರಿಸಿ ಅಂತ ಕೇಳಿಲ್ಲ. ಜಗಳ ಆಡಿ ಬಗೆಹರಿಸಿ ಅಂದ್ರೆ ನಮ್ಮ ಮನೆಯಲ್ಲೇ ಮಾಡೋದು ಎಂದು ಹೇಳಿದರು.
ಅಧ್ಯಕ್ಷ ಸ್ಥಾನ ಅನ್ನೋದು ಒಂದು ಸ್ಥಾನ. ಅದಕ್ಕೆ ಕೊಡುವ ಸ್ಥಾನ ಕೊಟ್ಟೇ ಕೊಡ್ತೀವಿ. ನ್ಯಾಯಪೀಠ ಬದಲಾಗಲ್ಲ, ನ್ಯಾಯಧೀಶರು ಬದಲಾಗ್ತಾರೆ. ಪೀಠ ಹಾಗೇ ಇರುತ್ತೆ, ಆ ಪೀಠಕ್ಕೆ ಕೊಡುವ ಗೌರವ ಕೊಟ್ಟೇ ಕೊಡ್ತೀವಿ ಎಂದ ಅವರು ನಮ್ಮ ಗುರಿ ಒಂದೇ, ಕೇಂದ್ರದಲ್ಲಿ ಮೋದಿ ಸರ್ಕಾರ ಮತ್ತೆ ಬರಬೇಕು ಎಂದು ತಿಳಿಸಿದರು.ರಾಜಕೀಯ ಬೇಡ ಅಂದ್ರೆ ಬಿಜೆಪಿ ಬಿಟ್ಟು ಇರ್ತೀನಿ… ಆದ್ರೆ, ಬೇರೆ ಪಾರ್ಟಿಗೆ ಹೋಗಿ ರಾಜಕೀಯ ಮಾಡಲ್ಲ… ಎಂದರು.ನಾನು ಬೇರೆ ಪಕ್ಷಕ್ಕೆ ಮತ ಕೇಳಲು ಆಗಲ್ಲ, ಬಿಜೆಪಿಗೆ ಮತ ಕೇಳಬೇಕು. ಯಾವುದೇ ಜವಾಬ್ದಾರಿ ಇಲ್ಲ ಅಂದ್ರು ಶಕ್ತಿ ಮೀರಿ ಬಿಜೆಪಿ ಮತ ಕೇಳೋದು.. ನನ್ನ ಜವಾಬ್ದಾರಿ ಎಂದು ಹೇಳಿದರು.ನನಗೆ ಸ್ಥಾನ ಕೊಟ್ರೆ ಮಾತ್ರ ಬಿಜೆಪಿ, ಕೊಡದಿದ್ರೆ ಬಿಜೆಪಿ ಅಲ್ಲ ಅಂತ ಹೇಳಲು ಆಗುತ್ತಾ. ಬಿಜೆಪಿ ಸೇರಿದಾಗಿನಿಂದ ಓಟ್ ಕೇಳಿರೋದು, ಹಾಕಿರೋದು ಎರಡೂ ಬಿಜೆಪಿಗೆ ಎಂದು ಪಕ್ಷ ಪ್ರೀತಿಯನ್ನು ವ್ಯಕ್ತಪಡಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g