May 20, 2024

MALNAD TV

HEART OF COFFEE CITY

ಸಿ.ಟಿ.ರವಿ ಪಾರ್ಟಿ ಮ್ಯಾನ್, ಇಂಧನ ಸಚಿವ ಕೆ.ಜೆ.ಜಾರ್ಜ್ ವ್ಯಂಗ್ಯ

1 min read

 

ಚಿಕ್ಕಮಗಳೂರು. ಹೆಚ್ಚುವರಿ 5 ಕೆಜಿ ಅಕ್ಕಿಯನ್ನು ಜನ ಕೊಂಡುಕೊಳ್ಳುತ್ತಾರೆ. ನೀವು ಮೊದಲು ಅವರ ಖಾತೆಗೆ ಹಣ ಹಾಕಿ ಎಂದಿದ್ದ ಮಾಜಿ ಶಾಸಕ ಸಿ.ಟಿ.ರವಿಗೆ ಇಂಧನ ಸಚಿವ ಹಾಗೂ ಚಿಕ್ಕಮಗಳೂರು ಉಸ್ತುವಾರಿ ಕೆ.ಜೆ.ಜಾರ್ಜ್ ಸಿ.ಟಿ.ರವಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ಚಿಕ್ಕಮಗಳೂರು ನಗರದಲ್ಲಿ ಮಾತನಾಡಿದ ಅವರು, ನಾವು ಅಕ್ಕಿಯನ್ನು ಉಚಿತವಾಗಿ ಕೇಳುತ್ತಿಲ್ಲ. ದುಡ್ಡು ಕೊಡ್ತೀವಿ ಕೊಡಿ ಎಂದು ಕೇಳಿದ್ದೇವೆ. ಜನರಿಗೆ ಬೇಕಾಗಿರುವುದು ಅಕ್ಕಿ.‌ ದುಡ್ಡಲ್ಲ. ಎಫ್.ಸಿ.ಐ. ಅವರೇ ಸ್ಟಾಕ್ ಇದೆ. ಕೊಡುತ್ತೇವೆ ಎಂದು ಲೆಟರ್ ಕೊಟ್ಟಿದ್ದಾರೆ. ಈಗ ಅಕ್ಕಿ ವಾಪಸ್ ಹೋಗಿದೆ. ಕೊಳೆಯಲು ಬಿಟ್ಟಿದ್ದೀರಾ ರವಿ ಅವರೇ ಎಂದಿದ್ದಾರೆ. ಪಾಪ… ಸಿ.ಟಿ.ರವಿ he is a party man… ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ. ಅವರಿಗೆ ಇದೆಲ್ಲ ಹೇಗೆ ಗೊತ್ತಾಗುತ್ತೆ ಎಂದು ಲೇವಡಿ ಮಾಡಿದ್ದಾರೆ.‌ ಅಕ್ಕಿ ಇರುವುದೇ ಬಡವರಿಗೆ ಕೊಡುವುದಕ್ಕೆ. ದುಡ್ಡು ಕೊಡಿ ಅಂದ್ರೆ ಹೇಗೆ. ಜನರಿಗೆ ಬೇಕಾಗಿರುವುದು ಅಕ್ಕಿ. ದುಡ್ಡಲ್ಲ ಎಂದಿದ್ದಾರೆ.‌ ಇದೇ ವೇಳೆ, ಮತಾಂತರ ನಿಷೇಧ ಕಾಯ್ದೆ ಹಿಂಪಡೆದಿದ್ದಕ್ಕೆ ಬಿಜೆಪಿಯವರ ಪ್ರತಿಭಟನೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರ ಕೆಲಸವೇ ವಿರೋಧ ಮಾಡೋದು.‌ ಕಾಂಗ್ರೆಸ್ಸಿನ ಅಭಿವೃದ್ಧಿ ಹೆಜ್ಜೆಗೆ ವಿರೋಧವೇ ಅವರ ಕೆಲಸ. ಅವರು ಪ್ರತಿ ಪಕ್ಷ‌ ಅಲ್ಲ, ವಿರೋಧ ಪಕ್ಷ ಎಂದು ಲೇವಡಿ ಮಾಡಿದ್ದಾರೆ. ಮತಾಂತರ ನಿಷೇಧ ಕಾಯ್ದೆ ಮೊದಲೇ ಇತ್ತು. ಬಲವಂತ ಹಾಗೂ ಆಶ್ವಾಸನೆ ಕೊಟ್ಟು ಮತಾಂತರ ಮಾಡೋದು ತಪ್ಪು. ಅದು ಹಳೇ ಕಾಯ್ದೆಯೇ ಇದೆ. ಅದನ್ನ ನಾವು ಒಪ್ಪುತ್ತೇವೆ. ಆದರೆ, ಅವರು ಕೆಲವು ತಪ್ಪು ಮಾಡಿದ್ದಾರೆ. ಆರೋಪ ಮಾಡಿದವರು ಪ್ರೂವ್ ಮಾಡಬೇಕು. ಆರೋಪ ಮಾಡುವವರು ಸಾಕ್ಷಿ ಕೊಟ್ಟು ಹೇಳಬೇಕು. ನನ್ನ ಮೇಲೆ ಆರೋಪ‌ ಮಾಡಿದರೆ, ನಾನೇ ಪ್ರೂವ್ ಮಾಡಬೇಕಾ. ಇದು ಯಾವ ಕಾನೂನಿನಲ್ಲಿ ಇದೆ ಎಂದು ಪ್ರಶ್ನಿಸಿದ್ದಾರೆ.‌ ಬಿಜೆಪಿಯವರು ಈ ರೀತಿ ತುಂಬಾ ತಪ್ಪು ಮಾಡಿದ್ದಾರೆ. ಅದನ್ನ ನಾವು ಸರಿ ಮಾಡುತ್ತೇವೆ. ಇಷ್ಟು ದಿನ ಅವರೇ ಇದ್ದರಲ್ಲಾ ಹೊಸದಾಗಿ ಏನು ಕಂಡು ಹಿಡಿದಿದ್ದಾರೆ ಎಂದು ಪ್ರಶ್ನಿಸಿದ್ದಾರೆ.‌ನಮ್ಮ ಜವಾಬ್ದಾರಿ ಇದೆ. ಎಲ್ಲರಿಗೂ ಸರಿ ಆಗುವ ಕಾಯ್ದೆ ಜಾರಿಗೆ ಮಾಡುತ್ತೇವೆ ಎಂದಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!