April 28, 2024

MALNAD TV

HEART OF COFFEE CITY

ಸೈಕ್ಲೋನ್ ಎಫೆಕ್ಟ್: ಕಳೆದ ರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ

1 min read

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಕಳೆದ ರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತ ಆಗಿದೆ. ಜಿಲ್ಲೆಯಲ್ಲಿ ಇನ್ನು ಮೂರು ದಿನಗಳ ಕಾಲ ಮಳೆ ಜೊತೆಗೆ ತಂಪಾದ ವಾತಾವರಣ ಇರುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಇದರ ಮುನ್ಸೂಚನೆ ನೀಡಿದ್ದು, ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಕಳೆದ ರಾತ್ರಿಯಿಂದ ನಿರಂತರವಾಗಿ ಮಳೆಯಾಗುತ್ತಿದೆ.

ಜಿಲ್ಲೆಯ ಮಲೆನಾಡು ಭಾಗವಾದ ಕೊಟ್ಟಿಗೆಹಾರ, ಕಳಸ, ಚಾರ್ಮಾಡಿ ಘಾಟ್ ನಲ್ಲಿ ಮಳೆಯಾಗುತ್ತಿದ್ದು, ಇತ್ತ ಮಳೆಗೆ ಕಾಫಿಗಿಡದಿಂದ ಕಾಫಿ ಉದುರುತ್ತಿದೆ, ಒಂದೇ ದಿನದ ಮಳೆಗೆ ಆಪಾರ ಪ್ರಮಾಣದ ಕಾಫಿಗೆ ಹಾನಿಉಂಟಾಗಿದ್ದು, ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಜಾವಳಿ ಮೂಡಿಗೆರೆಯಲ್ಲಿ ಮಳೆಗೆ ಕಾಫಿ ಬೆಳೆ ಹಾನಿಯಾಗಿದೆ. ಸೈಕ್ಲೋನ್ ಎಫೆಕ್ಟ್ ಗೆ ಕಾಫಿ ಬೆಳೆಗಾರರು ಕಂಗಾಲಾಗಿದ್ದಾರೆ. ಅಷ್ಟೇ ಅಲ್ಲದೆ ಕೆಲವೆಡೆ ಕೊಯ್ಲು ಮಾಡಿದ್ದ ಭತ್ತದ ಬೆಳೆಯೂ ಕೂಡ ಮಳೆಗೆ ಹಾನಿಯಾಗಿದೆ. ರೈತರಿಗೆ ಬರಗಾಲದ ನಡುವೆ ಅಕಾಲಿಕ ಮಳೆ ಆಘಾತವನ್ನುಂಟು ಮಾಡಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!