ದಲಿತ ಜೆಸಿಬಿ ಡ್ರೈವರ್ ಗೆ ಸವರ್ಣೀಯರಿಂದ ದಂಡ: ಡಿ.ಎಸ್.ಎಸ್ ಪ್ರತಿಭಟನೆ
1 min readಚಿಕ್ಕಮಗಳೂರು: ಜೆಸಿಬಿ ಚಾಲಕ ಸವರ್ಣೀಯರ ಬಡಾವಣೆಗೆ ಹೋಗಿದ್ದಾನೆಂಬ ಕಾರಣಕ್ಕೆ ಮೇಲ್ವರ್ಗದವರು ಚಾಲಕನ ಮೇಲೆ ಹಲ್ಲೆ ಮಾಡಿ ಜಾತಿ ನಿಂದನೆ ಮಾಡಿ ಚಾಲಕನಿಂದ ದಂಡ ವಸೂಲಿ ಮಾಡಿದ ಘಟನೆ ತರೀಕೆರೆ ತಾಲೂಕಿನ ಗೇರು ಮರಡಿ ಗ್ರಾಮದ ಗೊಲ್ಲರಹಟ್ಟಿಯಲ್ಲಿ ಸೋಮವಾರ ಸಂಜೆ ನಡೆದಿತ್ತು.
ಈ ಘಟನೆ ಖಂಡಿಸಿ, ಹಲ್ಲೆ ಮಾಡಿ ಜಾತಿನಿಂದನೆ ಮಾಡಿರುವ, ದಂಢ ವಿಧಿಸಿರುವ ಆರೋಪಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ದಲಿತ ಸಂಘಟನೆಗಳ ಮುಖಂಡರು ಮಂಗಳವಾರ ಗ್ರಾಮದಲ್ಲಿ ಧರಣಿ ಆರಂಭಿಸಿದ್ದಾರೆ. ಸೋಮವಾರ ಸಂಜೆ ದಲಿತ ಸಮುದಾಯದ ಜೆಸಿಬಿ ಚಾಲಕ ಮಾರುತಿ ಗ್ರಾಮದ ಸವರ್ಣೀಯರ ಬಡಾವಣೆಗೆ ಜೆಸಿಬಿಯೊಂದಿಗೆ ತೆರಳಿದ್ದು, ಮನೆ ಕೆಡಗುವ ವೇಳೆ ಡಿಶ್ ವೈಯರ್ ತುಂಡಾದ ಹಿನ್ನಲೆಯಲ್ಲಿ ಪಾನಮತ್ತನಾಗಿದ್ದ ವ್ಯಕ್ತಿ ಜೆಸಿಬಿ ಡ್ರೈವರ್ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾದ ಜೆಸಿಬಿ ಡ್ರೈವರ್ ಮಾರುತಿ ತರೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಜೆಸಿಬಿ ಡ್ರೈವರ್ ಗ್ರಾಮಕ್ಕೆ ತೆರಳಿದ್ದಕ್ಕೆ ಹಲ್ಲೆ ನಡೆಸಿ, ದಂಡವನ್ನೂ ವಿಧಿಸಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಮುಖಂಡರು ಆರೋಪಿಸಿದ್ದು, ಗ್ರಾಮದಲ್ಲಿ ರಾತ್ರಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಮಂಗಳವಾರ ಗ್ರಾಮದಲ್ಲಿ ಮುಖಂಡರು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದು, ಗ್ರಾಮದಲ್ಲಿ ಪೊಲೀಸರು ತೆರಳಿ ಪರಿಸ್ಥಿತಿ ನಿಯಂತ್ರಿಸುತ್ತಿದ್ದಾರೆ ಜಾತಿ ವ್ಯವಸ್ಥೆ ಇಂದಿಗೂ ಇದ್ದು, ಯುವಕ ಡ್ರೈವರ್ ಗ್ರಾಮಕ್ಕೆ ತೆರಳಿದ್ದಕ್ಕೆ ಹಲ್ಲೆ ಮಾಡಲಾಗಿದೆ. ಆತನ ಬಳಿ ಇದ್ದ 2,200ರೂ ದಂಡದ ರೂಪದಲ್ಲಿ ಪಡೆಯಲಾಗಿದೆ ಎಂದು ಆರೋಪಿಸಿರುವ ಡಿಎಸ್ ಎಸ್ ಮುಖಂಡರು ಸ್ಥಳಕ್ಕೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ಅಧಿಕಾರಿಗಳು ಆಗಮಿಸುವಂತೆ ಪಟ್ಟು ಹಿಡಿದಿದ್ದಾರೆ. ಹಲ್ಲೆ ನಡೆಸಿದ ಆರೋಪಿಯನ್ನು ಬಂಧಿಸಬೇಕೆಂದು ಪಟ್ಟು ಹಿಡಿದಿದ್ದಾರೆ. ಗ್ರಾಮದಲ್ಲಿ ಸದ್ಯ ಬಿಗುವಿನ ವಾತಾವರಣವಿದ್ದು, ಪೊಲೀಸರು ಆರೋಪಿಗಳ ವಿರುದ್ದ ಎಪ್ ಐಆರ್ ದಾಖಲಿಸಲಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g