ಸಫಾರಿ ನಡೆಸಲು ಮುತ್ತೋಡಿ ರಕ್ಷಿತಾರಣ್ಯಕ್ಕೆ ಬಂದ ನಟ ದರ್ಶನ್
1 min readಚಿಕ್ಕಮಗಳೂರು : ಸಫಾರಿ ನಡೆಸುವ ಸಲುವಾಗಿ ಕನ್ನಡ ಚಿತ್ರ ನಟ ದರ್ಶನ್ ಇಂದು ಮುತ್ತೋಡಿ ರಕ್ಷಿತಾರಣ್ಯಕ್ಕೆ ಭೇಟಿ ನೀಡಿದರು. ಈ ವೇಳೆ ಅರಣ್ಯಾ ಇಲಾಖೆಯ ಅಧಿಕಾರಿಗಳು ಹೂಗುಚ್ಚ ನೀಡಿ ಅವರನ್ನು ಬರಮಾಡಿಕೊಂಡರು.
ಚಿಕ್ಕಮಗಳೂರು ತಾಲೂಕಿನ ಮುತ್ತೋಡಿಗೆ ಭೇಟಿ ನೀಡಿ, ಭದ್ರಾ ರಕ್ಷಿತಾರಣ್ಯದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಫಾರಿ ನಡೆಸಿದರು. ದರ್ಶನ್ ಬರುತ್ತಿರುವ ಸುದ್ದಿ ತಿಳಿದ ಅವರ ಅಪಾರ ಅಭಿಮಾನಿಗಳು ಅವರ ಜೊತೆ ಸೆಲ್ಪಿ ತೆಗೆಸಿಕೊಂಡರು. ಸ್ನೇಹಿತರ ಜೊತೆ ಮುತ್ತೋಡಿಗೆ ಆಗಮಿಸಿದ್ದ ನಟ ದರ್ಶನ್ ನಿನ್ನೆ ರಾತ್ರಿ ಬಂದು ಇಂದು ಮಧ್ಯಾಹ್ನ ಸಫಾರಿ ಮುಗಿಸಿ ಬೆಂಗಳೂರಿಗೆ ತೆರಳಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g