May 16, 2024

MALNAD TV

HEART OF COFFEE CITY

ದತ್ತಜಯಂತಿ ಹಿನ್ನೆಲೆ, ಮನೆ-ಮನೆಗೆ ತೆರಳಿ ಸಿ.ಟಿ.ರವಿ ಭಿಕ್ಷಾಟನೆ

1 min read

 

ದತ್ತಜಯಂತಿ ಹಿನ್ನೆಲೆ ಶಾಸಕ ಸಿ.ಟಿ.ರವಿ ಮನೆ-ಮನೆಗೆ ತೆರಳಿ ಭಿಕ್ಷಾಟನೆ ನಡೆಸಿದ್ದಾರೆ. ನಗರದ ನಾರಾಯಣಪುರ, ರಾಘವೇಂದ್ರ ಮಠದ ರಸ್ತೆ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿ ಮನೆ-ಮನೆಗೆ ತೆರಳಿ ಭಿಕ್ಷಾಟನೆ ನಡೆಸಿದ್ದಾರೆ. ಪಡಿ ಸಂಗ್ರಹಕ್ಕೆ ಮನೆಗೆ ಬಂದ ದತ್ತಮಾಲಾಧಾರಿಗಳಿಗೆ ಸಾರ್ವಜನಿಕರು ತೆಂಗಿನಕಾಯಿ, ಬಾಳೆಹಣ್ಣು, ಅಕ್ಕಿ, ವಿಳ್ಯೆದೆಲೆ ಅಡಿಕೆ -ಬೆಲ್ಲ ನೀಡಿದರು. ಇಂದು ಮನೆಮನೆಗೆ ತೆರಳಿ ಪಡಿ ಸಂಗ್ರಹಿಸಿದ ದತ್ತಮಾಲಾಧಾರಿಗಳು ನಾಳೆ ಇರುಮುಡಿ ರೂಪದಲ್ಲಿ ಅದನ್ನ ದತ್ತಪೀಠಕ್ಕೆ ಕೊಂಡೊಯ್ದು ದತ್ತಾತ್ರೇಯ ಸ್ವಾಮಿಗೆ ಅರ್ಪಣೆ ಮಾಡಲಿದ್ದಾರೆ. ಪಡಿ ಸಂಗ್ರಹಕ್ಕೆ ಶಾಸಕ ಸಿ.ಟಿ. ರವಿಗೆ 20ಕ್ಕೂ ಹೆಚ್ಚು ಮಾಲಾಧಾರಿಗಳು ಸಾಥ್ ನೀಡಿದ್ದಾರೆ. ಇಂದು ಮಧ್ಯಾಹ್ನ ನಗರದಲ್ಲಿ 30 ಸಾವಿರಕ್ಕೂ ಅಧಿಕ ದತ್ತಭಕ್ತರಿಂದ ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಹಾಗಾಗಿ, ಮುಂಜಾಗೃತ ಕ್ರಮವಾಗಿ ಶೋಭಾಯಾತ್ರೆ ತೆರಳುವ ಮಾರ್ಗದಲ್ಲಿ ಪಾರ್ಕಿಂಗ್ ಕ್ಯಾನ್ಸಲ್ ಮಾಡಿದ್ದು, ಬೆಳಗ್ಗೆಯಿಂದಲೂ ಪೊಲೀಸರು ಕಾವಲಿದ್ದು, ಖಾಕಿ ಪಡೆ ಜಿಲ್ಲಾದ್ಯಂತ ಹೈ ಅಲರ್ಟ್ ಘೋಷಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!