ದತ್ತಜಯಂತಿ ಹಿನ್ನೆಲೆ, ಕಾಫಿನಾಡ ಮುಳ್ಳಯ್ಯನಗಿರಿ ಭಾಗಕ್ಕೆ 4 ದಿನ ಪ್ರವಾಸಿಗರಿಗೆ ನಿರ್ಬಂಧ
1 min readಚಿಕ್ಕಮಗಳೂರು : ಇದೇ ಡಿಸೆಂಬರ್ 16 ರಿಂದ 20ನೇ ತಾರೀಖಿನ ಬೆಳಗ್ಗೆವರೆಗೆ ರಾಜ್ಯದ ಅತ್ಯಂತ ಎತ್ತರದ ಪ್ರದೇಶ ಹಾಗೂ ಪ್ರವಾಸಿ ಪ್ರಿಯರ ನೆಚ್ಚಿನ ತಾಣ ತಾಲೂಕಿನ ಮುಳ್ಳಯ್ಯನಗಿರಿ ಭಾಗಕ್ಕೆ ಪ್ರವಾಸಿಗರಿಗೆ ಸಂಪೂರ್ಣ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಇದೇ ಡಿಸೆಂಬರ್ 17 ರಿಂದ 19ರವರೆಗೆ ಜಿಲ್ಲೆಯಲ್ಲಿ ದತ್ತಜಯಂತಿ ಕಾರ್ಯಕ್ರಮ ನಡೆಯಲಿದೆ. ಈ ಮೂರು ದಿನವೂ ದತ್ತಪೀಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಹಾಗಾಗಿ, 17-18-19 ವಾರಾಂತ್ಯ ಆಗಿರುವುದರಿಂದ ಈ ಭಾಗಕ್ಕೆ ಸಾವಿರಾರು ಪ್ರವಾಸಿಗರು ಭೇಟಿ ನೀಡಿಲಿದ್ದಾರೆ. ಹಾಗಾಗಿ, ಟ್ರಾಫಿಕ್ ಜಾಮ್ ಆಗಿ ಮತ್ತೊಂದು ಅನಾಹುತ ಸಂಭವಿಸುವುದು ಬೇಡವೆಂದು ಜಿಲ್ಲಾಧಿಕಾರಿ 16 ರಿಂದ 20ನೇ ತಾರೀಖಿನವರೆಗೆ ನಾಲ್ಕು ದಿನವೂ ಈ ಭಾಗಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿದ್ದಾರೆ.
17 ರಂದು ದತ್ತಪೀಠದಲ್ಲಿ ಅನಸೂಯ ಯಾಗ ನಡೆಯಲಿದೆ, 18 ರಂದು ನಗರದಲ್ಲಿ ಬೃಹತ್ ಶೋಭಾಯಾತ್ರೆ ಹಾಗೂ 19ರಂದು ರಾಜ್ಯದ ವಿವಿಧ ಭಾಗಗಳಿಂದ ದತ್ತಪೀಠಕ್ಕೆ ಸುಮಾರು 20 ಸಾವಿರಕ್ಕೂ ಅಧಿಕ ಭಕ್ತರು ಭೇಟಿ ನೀಡಲಿದ್ದಾರೆ. ಆದ್ದರಿಂದ ಜಿಲ್ಲಾಧಿಕಾರಿ ಈ ತಾಲೂಕಿನ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದತ್ತಪೀಠ, ಗಾಳಿಕೆರೆ, ಮಾಣಿಕ್ಯಧಾರ ಹಾಗೂ ಹೊನ್ನಮ್ಮನ ಹಳ್ಳಕ್ಕೆ ಪ್ರವಾಸಿಗರಿಗೆ ಡಿಸೆಂಬರ್ 16ರ ಬೆಳಗ್ಗೆ 6 ಗಂಟೆಯಿಂದ ಡಿಸೆಂಬರ್ 20ರ ಬೆಳಗ್ಗೆ 6 ಗಂಟೆವರೆಗೆ ನಾಲ್ಕು ದಿನಗಳ ಕಾಲ ಪ್ರವಾಸಿಗರಿಗೆ ಸಂಪೂರ್ಣ ನಿರ್ಬಂಧ ವಿಧಿಸಿದ್ದಾರೆ. ಈ ತಾಣಗಳನ್ನ ಹೊರತುಪಡಿಸಿ ಜಿಲ್ಲೆಯ ಇತರೆ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡಲು ಯಾವುದೇ ನಿರ್ಬಂಧ ಇರುವುದಿಲ್ಲ. ಹೋಂಸ್ಟೇ, ರೆಸಾರ್ಟ್, ಹೋಟೆಲ್ಗಳಲ್ಲಿ ರೂಂ ಬುಕ್ ಮಾಡಿರುವವರು ವಾಸ್ತವ್ಯ ಹೂಡಲು ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಆದೇಶಿಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g