May 19, 2024

MALNAD TV

HEART OF COFFEE CITY

ದತ್ತಮಾಲಾ ಅಭಿಯಾನಕ್ಕೆ ಶಾಂತಿಯುತ ತೆರೆ,

1 min read

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಕಳೆದೊಂದು ವಾರದಿಂದ ಶ್ರೀರಾಮಸೇನಾ ವತಿಯಿಂದ ನಡೆಯುತ್ತಿದ್ದ ದತ್ತಮಾಲಾ ಅಭಿಯಾನ ಇಂದು ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ರಾಜ್ಯದ ಮೂಲೆಮೂಲೆಗಳಿಂದ ಬಂದಿದ್ದ ದತ್ತಭಕ್ತರು ದತ್ತಪಾದುಕೆ ದರ್ಶನ ಪಡೆದು ಪುನೀತರಾದ್ರು. ಸುಮಾರು 1000ಕ್ಕೂ ಪೊಲೀಸರು ಹೆಜ್ಜೆಗೊಬ್ಬರಂತೆ ನಿಂತು ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದ್ರು. ದತ್ತಪೀಠದ ಹೊರಭಾಗದಲ್ಲಿ ಹೋಮ-ಹವನ ನಡೆಸಿ, ದತ್ತಪೀಠ ಹಿಂದೂಗಳದ್ದೆಂದು ಆಗ್ರಹಿಸಿದ್ರು.

ಕಳೆದೊಂದು ವಾರದಿಂದ ಕಾಫಿನಾಡು ಚಿಕ್ಕಮಗಳೂರಿನ ದತ್ತಪೀಠದಲ್ಲಿ ನಡೆಯುತ್ತಿದ್ದ ದತ್ತಮಾಲಾ ಅಭಿಯಾನಕ್ಕೆ ಶಾಂತಿಯುತ ತೆರೆ ಬಿದ್ದಿದೆ. ಬೆಳಗ್ಗೆ ದತ್ತ ಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸಿ ದತ್ತಪಾದುಕೆ ದರ್ಶನ ಪಡೆದ್ರು. ಕೊರೋನಾ ಹಿನ್ನೆಲೆ ಜಿಲ್ಲಾಡಳಿತದ ಸೂಚನೆಯಂತೆ ಐನ್ನೂರಕ್ಕೂ ಹೆಚ್ಚು ಮಂದಿ ದತ್ತಪಾದುಕೆ ದರ್ಶನ ಪಡೆದರು. ಅಭಿಯಾನಕ್ಕೆ ಆಗಮಿಸಿದ್ದ ಸ್ವಾಮೀಜಿಗಳಿಗೆ ದತ್ತಪಾದುಕೆಗೆ ಪುಷ್ಪಾರ್ಚನೆ ಮಾಡಿದರು. ಬಳಿಕ, ಹೋಮ ಮಂಟಪದಲ್ಲಿ ಗಣಪತಿ, ದತ್ತಾತ್ರೇಯ ಹೋಮವನ್ನು ನಡೆಸಿ ಧಾರ್ಮಿಕ ಸಭೆಯನ್ನು ನಡೆಸಿದರು. ಹಿಂದೂ ಅರ್ಚಕರ ಶೀಘ್ರ ನೇಮಿಸಿ ದತ್ತಪೀಠವನ್ನು ಹಿಂದೂಗಳಿಗೆ ಒಪ್ಪಿಸಬೇಕೆಂಬ ಆಗ್ರಹ ಎಂದಿನಂತೆ ಇತ್ತು. ದತ್ತಪೀಠದ ಚೆಂಡು ಸರ್ಕಾರದ ಅಂಗಳದಲ್ಲಿದೆ. ಹಿಂದುತ್ವದ ಹೆಸರೇಳಿಕೊಂಡು ಅಧಿಕಾರಕ್ಕೆ ಬಂದ ಸರ್ಕಾರ ಕೂಡಲೇ ದತ್ತಪೀಠವನ್ನ ಹಿಂದೂಗಳಿಗೆ ಒಪ್ಪಿಸುವಂತೆ ಆಗ್ರಹಿಸಿದ್ದಾರೆ.

 

 

ಇನ್ನು ರಾಜ್ಯದ ವಿವಿಧ ಭಾಗದಿಂದ ದತ್ತಮಾಲಾಧಾರಿಗಳು ಆಗಮಿಸಿದ್ರು. ಕೋಲಾರದಿಂದ ರಾತ್ರಿ ದತ್ತಪೀಠಕ್ಕೆ ಹೊರಟ್ಟಿದ್ದ ಮಾಲಾಧಾರಿಗಳ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದು ಕೆಲ ಕಾಲ ಕೋಲಾರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಈ ಹಲ್ಲೆಗೆ ಶ್ರೀರಾಮಸೇನೆ ಪ್ರತಿಭಟನೆ ನಡೆಸಿ ಎಸ್ಪಿಗೆ ಮನವಿ ಸಲ್ಲಿಸಿದರು. ಹಲ್ಲೆಕೋರರನ್ನ ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದರು. ದತ್ತಪೀಠಕ್ಕೆ ಹೊರಟಿದ್ದ ಬಸ್ಸಿಗೆ ಯಾಕೆ ರಕ್ಷಣೆ ನೀಡಿಲ್ಲ ಎಂದು ಕೋಲಾರದ ಜಿಲ್ಲಾಧಿಕಾರಿಗಳ ವಿರುದ್ಧವೂ ಹರಿಹಾಯ್ದರು. ಕೂಡಲೇ ಹಲ್ಲೆಕೋರರನ್ನ ಬಂಧಿಸದಿದ್ದಲ್ಲಿ ನಾಳೆಯಿಂದ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಒಟ್ಟಾರೆ, ಕಳೆದೊಂದು ವಾರದಿಂದ ಕೆಸರಿಮಯವಾಗಿದ್ದ ಚಿಕ್ಕಮಗಳೂರು ನಾಳೆಯಿಂದ ಯತಾಸ್ಥಿತಿಗೆ ಮರಳಲಿದೆ. ಹತ್ತನ್ನೆರಡು ವರ್ಷಗಳ ಹಿಂದಿನ ದತ್ತಪೀಠವೇ ಬೇರೆ ಇಂದಿನ ದತ್ತಪೀಠವೇ ಬೇರೆ. ದತ್ತಪೀಠ ಅಂದ್ರೆ ಅಂದು ಭಕ್ತಿ ಇದ್ರೆ, ಇಂದು ಗಲಾಟೆ ಎಂಬ ಭಯದ ವಾತಾವರಣ ಇದೆ. ಆದ್ರೆ, ಪೊಲೀಸರು ಸರ್ಪಗಾವಲಿನಿಂದ ಯಾವುದೇ ಅಹಿತಕರ ಘಟನೆ ನಡೆಯದೇ ಎಲ್ಲಾ ಶಾಂತರೀತಿಯಲ್ಲಿ ಮುಕ್ತಾಯವಾಗಿದ್ದು, ಎಂದಿನಂತೆ ದತ್ತಪೀಠ ಹಿಂದುಗಳ ಪೀಠ, ಅದನ್ನ ಹಿಂದೂಗಳಿಗೆ ಒಪ್ಪಿಸಬೇಕೆಂಬ ಕೂಗ ಬಲವಾಗಿತ್ತು…..

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!