May 18, 2024

MALNAD TV

HEART OF COFFEE CITY

ದತ್ತಮಾಲಾ ಅಭಿಯಾನ; ನ.4 ರಿಂದ ನ.6 ವರೆಗೆ ಪ್ರವಾಸಿಗರಿಗೆ ನಿರ್ಬಂಧ 

1 min read

 

 

ಚಿಕ್ಕಮಗಳೂರು: ಜಿಲ್ಲೆಯ ಐ.ಡಿ. ಪೀಠ, ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್‌ ಸ್ವಾಮಿ ದರ್ಗಾ ಸಂಸ್ಥೆಗೆ ನ.05 ರಂದು ಶ್ರೀರಾಮಸೇನಾ ಕಾರ್ಯಕರ್ತರು ಆಗಮಿಸುವ ಹಿನ್ನಲೆಯಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳಾದ ಐ.ಡಿ ಪೀಠ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಹೊನ್ನಮ್ಮನ ಹಳ್ಳ, ಮಾಣಿಕ್ಯಧಾರಾ ಹಾಗೂ ಗಾಳಿಕರ ಪ್ರದೇಶಗಳಿಗೆ ನ .04 ರಂದು ಬೆಳಿಗ್ಗೆ 6 ಗಂಟೆಯಿಂದ ನ.06 ರ ಬೆಳಿಗ್ಗೆ 10 ವರೆಗೆ ಪ್ರವಾಸಿಗರು ಬರುವುದನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.  

 

ಶ್ರೀರಾಮ ಸೇನೆಯ ವತಿಯಿಂದ ಅ. 30 ರಿಂದ ನ.5 ರವರೆಗೆ ರಾಜ್ಯದ್ಯಂತ ದತ್ತಮಾಲಾ ಅಭಿಯಾನ ಹಮ್ಮಿಕೊಳ್ಳಲಾಗಿದೆ.ಈ ಹಿನ್ನಲೆಯಲ್ಲಿ ಲಾಂಗ್‌ ಚಾಸಿಸ್ ವುಳ್ಳ ವಾಹನಗಳ ಸಂಚಾರವನ್ನು ಸಹ ನಿರ್ಭಂದಿಸಲಾಗಿದೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಡಳಿತವು ತಿಳಿಸಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!