May 3, 2024

MALNAD TV

HEART OF COFFEE CITY

ಡಿ.ಬಿ ಚಂದ್ರೇಗೌಡ ವಿಧಿವಶ: ಅಂತಿಮ ದರ್ಶನ ಪಡೆದ ಮಾಜಿ ಸಿಎಂ ಸದಾನಂದ ಗೌ‌ಡ.. ಬಿಜೆಪಿ ಬಾವುಟ ಹೊದಿಸಿ ಗೌರವ ಸಲ್ಲಿಕೆ

1 min read

ಚಿಕ್ಕಮಗಳೂರು: ಮಾಜಿ ಸಚಿವ, ರಾಜಕೀಯ ಮುತ್ಸದ್ದಿ ಡಿ.ಬಿ ಚಂದ್ರೇಗೌಡ ನಿಧನ ಹಿನ್ನಲೆ ಮಾಜಿ ಸಿಎಂ ಸದಾನಂದ ಗೌ‌ಡ ಅವರು ಬಿಜೆಪಿ ಬಾವುಟ ಹೊದಿಸಿ ಪಕ್ಷದಿಂದ ಗೌರವ ಸಲ್ಲಿಸಿ, ಅಂತಿಮ ದರ್ಶನ ಪಡೆದರು.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣದ ಅಡ್ಯಂತಾಯ ರಂಗ ಮಂದಿರದಲ್ಲಿ ಅಂತಿಮ ದರ್ಶನ ಅವಕಾಶ ಕಲ್ಪಿಸಲಾಗಿದೆ. ಸಂಜೆ 6 ಗಂಟೆ ವರೆಗೂ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅಡ್ಯಂತಾಯ ರಂಗಮಂದಿರದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮಧ್ಯಾಹ್ನ ದಾರದಹಳ್ಳಿ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ರಾಜ್ಯದ ಹಿರಿಯ ರಾಜಕಾರಣಿ ಮತ್ತು ಜನ ಪ್ರತಿನಿಧಿಯಾಗಿ ರಾಜ್ಯಕ್ಕೆ ದಶಕಗಳ ಕಾಲ ಸೇವೆ ಸಲ್ಲಿಸಿದ್ದ ಹಾಗೂ ಕಾನೂನುಗಳ ಅಪರಿಮಿತ ಜ್ಞಾನ ಹೊಂದಿದ್ದ ಡಿಬಿ ಚಂದ್ರೇಗೌಡ ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನಲ್ಲಿರುವ ಸ್ವಗ್ರಾಮ ದಾರದಹಳ್ಳಿಯಲ್ಲಿ ನಿಧನ ಹೊಂದಿದ್ದಾರೆ. 87-ವರ್ಷ ವಯಸ್ಸಿನವರಾಗಿದ್ದ ಚಂದ್ರೇಗೌಡರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ತಲಾ ಮೂರು ಬಾರಿ ಶಾಸಕ ಮತ್ತು ಸಂಸದರಾಗಿ ಆಯ್ಕೆಯಾಗಿದ್ದ, ಅಪ್ತರಿಂದ ಡಿಬಿಸಿ ಎಂದು ಕರೆಸಿಕೊಳ್ಳುತ್ತಿದ್ದ ಗೌಡರು, ಪತ್ನಿ ಹಾಗೂ 4 ಪುತ್ರಿಯರನ್ನು ಅಗಲಿದ್ದಾರೆ. 1971 ರಲ್ಲಿ ಚಿಕ್ಕಮಗಳೂರುನಿಂದ ಮೊದಲ ಬಾರಿಗೆ ಸಂಸತ್ತಿಗೆ ಆಯ್ಕೆಯಾಗಿದ್ದ ಅವರು 1978ರಲ್ಲಿ ಪುನರಾಯ್ಕೆ ಗೊಂಡಿದ್ದರು. ಆದರೆ ದಿವಂಗತ ಪ್ರಧಾನ ಮಂತ್ರಿ ಇಂದಿರಾಗಾಂಧಿಯವರಿಗಾಗಿ ಸ್ಥಾನ ತೆರವುಗೊಳಿಸಿ ಅವರ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ನಿರ್ವಹಿಸಿದ್ದರು. ರಾಜ್ಯದ ಕಾನೂನು ಸಚಿವರಾಗಿ ಸೇವೆ ಸಲ್ಲಿಸಿದ್ದ ಡಿಬಿಸಿ; ರಾಮಕೃಷ್ಣ ಹೆಗಡೆ ಸರ್ಕಾರದಲ್ಲಿ ವಿಧಾನಸಭಾಧ್ಯಕ್ಷರಾಗಿ ಕೆಲಸಮಾಡಿದ್ದರು. ಕಾಂಗ್ರೆಸ್, ಜನತಾ ಪಾರ್ಟಿಯ ಬಳಿಕ ತಮ್ಮ ರಾಜಕೀಯ ಬದುಕಿನ ಕೊನೆಯ ಅಧ್ಯಾಯದಲ್ಲಿ ಬಿಜೆಪಿ ಸೇರಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾಗಿದ್ದರು. ಮೂಡಿಗೆರೆಯ ಅಡ್ಯಂತಾಯ ರಂಗಮಂದಿರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ದಾರದಹಳ್ಳಿಯ ಪೂರ್ಣಚಂದ್ರ ಎಸ್ಟೇಟ್ನಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಅಂತ ಕುಟುಂಬದ ಮೂಲಗಳು ತಿಳಿಸಿವೆ.

 

 

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!