ಡಿ.ಸಿ.ಸಿ ಬ್ಯಾಂಕ್ ನೂತನ ಉಪಾಧ್ಯಕ್ಷರಾಗಿ ಡಿ.ಸಿ ಶಂಕರಪ್ಪ ಅವಿರೋಧ ಆಯ್ಕೆ
1 min readಚಿಕ್ಕಮಗಳೂರು: ಡಿ.ಸಿ.ಸಿ ಬ್ಯಾಂಕ್ ನೂತನ ಉಪಾಧ್ಯಕ್ಷರಾಗಿ ಡಿ.ಸಿ ಶಂಕರಪ್ಪ ಅವಿರೋಧ ಆಯ್ಕೆಯಾಗಿದ್ದಾರೆ. ಇಂದು ಬ್ಯಾಂಕ್ ನಲ್ಲಿ ನಡೆದ ಚುನಾವಣೆಯಲ್ಲಿ ಉಪವಿಬಾಗಾಧಿಕಾರಿ ಎಚ್.ಡಿ ರಾಜೇಶ್ ಶಂಕರಪ್ಪ ಆಯ್ಕೆ ಘೋಷಿಸಿದರು. ಬ್ಯಾಂಕ್ ನ ಅಧ್ಯಕ್ಷ ಡಿ.ಎಸ್ ಸುರೇಶ್ ಸೇರಿದಂತೆ ಹಲವರು ಅವರನ್ನು ಅಭಿನಂಧಿಸಿದರು.
ಖಾಲಿ ಉಳಿದಿದ್ದ ಡಿ.ಸಿ.ಸಿ ಬ್ಯಾಂಕ್ ನ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಶೃಂಗೇರಿಯ ಬೇಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಡಿ.ಸಿ ಶಂಕರಪ್ಪ ಅವಿರೋಧವಾಗಿ ಆಯ್ಕೆಯಾದರು. ಬ್ಯಾಂಕ್ ನಲ್ಲಿ ಇಂದು ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಶಂಕರಪ್ಪ ಆಯ್ಕೆಯನ್ನು ಚುನಾವಣಾಧಿಕಾರಿ ಎ.ಸಿ ಎಚ್ ಡಿ ರಾಜೇಶ್ ಘೋಷಿಸಿದರು. ನೂತನವಾಗಿ ಉಪಾಧ್ಯಕ್ಷರಾದ ಶಂಕರಪ್ಪ ಮಾತನಾಡಿ ತಮ್ಮ ಆಯ್ಕೆಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಬ್ಯಾಂಕ್ ನ ಅಭಿವೃದ್ಧಿಗೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಶ್ರಮಿಸುವುದಾಗಿ ತಿಳಿಸಿದ ಅವರು ರೈತರಿಗೆ ಹೆಚ್ಚು ಸಾಲ ಸೌಲಭ್ಯಗಳನ್ನು ನೀಡುವ ಭರವಸೆ ನೀಡಿದರು. ಇದೇ ವೇಳೆ ಡಿ.ಸಿ ಶಂಕರಪ್ಪಗೆ ಬ್ಯಾಂಕ್ ನ ಅಧ್ಯಕ್ಷ ತರೀಕೆರೆ ಮಾಜಿ ಶಾಸಕ ಡಿ.ಎಸ್ ಸುರೇಶ್ ಸೇರಿದಂತೆ ಅನೇಕರು ಅಭಿನಂದನೆ ಸಲ್ಲಿಸಿದರು. ಶೃಂಗೇರಿ ಮೂಲದ ಶಂಕರಪ್ಪ ಆಯ್ಕೆಯಾಗಿದ್ದಕ್ಕೆ ಬೇಗಾರು ಗ್ರಾಮಸ್ಥರು ಸಹಾ ಅವರಿಗೆ ಪೇಟ ಹಾರ ಶಾಲು ಹೊದಿಸಿ ಅಭಿನಂದಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g