May 3, 2024

MALNAD TV

HEART OF COFFEE CITY

10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ‘ಡಿಡಿಪಿಐ ರಂಗನಾಥಸ್ವಾಮಿ’ ಇಂದು ಲೋಕಾಯುಕ್ತರ ಅತಿಥಿ..!

1 min read

ಚಿಕ್ಕಮಗಳೂರು : ಕಾಫಿನಾಡಲ್ಲಿ 10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಡಿಡಿಪಿಐ ರಂಗನಾಥಸ್ವಾಮಿ ಅವರ ಮೇಲೆ ಲೋಕಾಯುಕ್ತ ತಿರುಮಲೇಶ್ ನೇತೃತ್ವದ ತಂಡ ದಾಳಿ ಮಾಡಿದೆ.

ಮೂಡಿಗೆರೆ ತಾಲೂಕಿನ ಕಡೆಮಕ್ಕಲ್, ಹೆಸ್ಗಲ್ ಶಾಲೆಯ ಕಾಂಪೌಂಡ್ ನಿರ್ಮಾಣಕ್ಕೆ ಲಂಚ ಪಡೆದ ಹಿನ್ನಲೆಯಲ್ಲಿ ಲೋಕಾಯುಕ್ತರು ಡಿಡಿಪಿಐ ರಂಗನಾಥಸ್ವಾಮಿ ಮೇಲೆ ದಾಳಿ ಮಾಡಿದ್ದಾರೆ. ಸದ್ಯ ಡಿಡಿಪಿಐ ರಂಗನಾಥಸ್ವಾಮಿ ಲೋಕಾಯುಕ್ತ ಅತಿಥಿಯಾಗಿದ್ದಾರೆ. ಶಾಲೆಯ ಕಾಂಪೌಂಡ್ ನಿರ್ಮಾಣ ಮಾಡಲು 10 ಸಾವಿರ ಲಂಚದ ಬೇಡಿಕೆ ಇಟ್ಟಿದ್ದರು. ಹೌದು ಶಾಲಾ ಕಾಂಪೌಂಡ್ ನಿರ್ಮಾಣಕ್ಕೆ ಅನುಮೋದನೆ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅವರು ಎಸ್.ಡಿ.ಎ. ಅಸ್ರಾರ್ ಅಹಮದ್ ಮೂಲಕ ಡೀಲ್ ಕುದುರಿಸುತ್ತಿದ್ದರು ಎನ್ನಲಾಗಿದೆ. ಎಸ್.ಡಿ.ಎ. ಅಸ್ರಾರ್ ಅಹಮದ್ ಅವರು ಮುಂಗಡವಾಗಿ 1000 ಸಾವಿರ ಹಣ ಪಡೆದಿದ್ದರು. ಒಂದು ಫೈಲ್‍ಗೆ 5 ಸಾವಿರದಂತೆ 2 ಫೈಲ್‍ಗೆ 10 ಸಾವಿರ ರೂ ಲಂಚವನ್ನು ಡಿಡಿಪಿಐ ಕೇಳಿದ್ದರೆಂದು ಮೂಡಿಗೆರೆ ಮೂಲದ ಗುತ್ತಿಗೆದಾರ ಲೋಕಾಯುಕ್ತಕ್ಕೆ ದೂರು ನೀಡಿದ್ದರಿಂದ ಇಂದು ಲೋಕಾಯುಕ್ತ ತಿರುಮಲೇಶ್ ನೇತೃತ್ವದ ತಂಡವು ದಾಳಿ ಮಾಡಿ ರಂಗನಾಥಸ್ವಾಮಿ ಅವರನ್ನು ವಶಕ್ಕೆ ಪಡೆದಿದ್ದು ವಿಚಾರಣೆ ಮಾಡುತ್ತಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!