ಸಾವಿನ ಸುದ್ದಿ ಕೇಳಿ ಸಾವು
ಹಣಕಾಸಿನ ವಿಚಾರಕ್ಕೆ ಸ್ನೇಹಿತರಿಂದಲೇ ಸಹೋದರನ ಮಗ ಕೊಲೆಯಾದ ವಿಷಯ ಕೇಳಿ ಚಿಕ್ಕಪ್ಪನು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಕೋಡಿಕ್ಯಾಂಪ್ ಬಳಿ ನಡೆದಿದೆ. ಕಳೆದ ರಾತ್ರಿ ಮನೆಯಲ್ಲಿದ್ದ 30 ವರ್ಷದ ಓಂಕಾರ್ ಎಂಬುವನನ್ನ ಸ್ನೇಹಿತರೇ ಕರೆದೊಯ್ದು ನಗರದ ಎಪಿಎಂಸಿ ಯಾರ್ಡ್ ನಲ್ಲಿ ಕೊಲೆ ಮಾಡಿದ್ದರು. ವಿಷಯ ಕೇಳುತ್ತಿದ್ದಂತೆ ಮೃತ ಓಂಕಾರನ ಚಿಕ್ಕಪ್ಪ 55 ವರ್ಷದ ಪ್ರಕಾಶ್ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸೂರ್ಯಹುಟ್ಟಿ-ಮುಳುಗುವಷ್ಟರಲ್ಲಿ ಒಂದೇ ಮನೆಯಲ್ಲಿ ಇಬ್ಬರು ಸಾವನ್ನಪ್ಪಿರೋದ್ರಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಒಂದೇ ಕುಟುಂಬದ ಅಕ್ಕಪಕ್ಕದ ಮನೆಯಲ್ಲಿ ಎರಡು ಶವಗಳಿದ್ದು ಮನೆಯವರ ಜೊತೆ ಬೀದಿಯ ಜನ ಕೂಡ ಕಣ್ಣೀರಿಟ್ಟಿದ್ದಾರೆ. ಎರಡು ವರ್ಷ ಹಾಗೂ ನಾಲ್ಕು ತಿಂಗಳ ಎರಡು ಮಕ್ಕಳಿರುವ 30 ವರ್ಷದ ಯುವಕನನ್ನ ಹಣಕಾಸಿನ ವಿಚಾರವಾಗಿ ಸ್ನೇಹಿತರೇ ಮಾತುಕತೆಗೆ ಕರೆಸಿಎಪಿಎಂಸಿ ಯಾರ್ಡ್ ನಲ್ಲಿ ಮಾತುಕತೆ ವೇಳೆ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದರು. ಈ ವಿಷಯ ಕೇಳಿ ಓಂಕಾರ್ ಚಿಕ್ಕಪ್ಪ ಪ್ರಕಾಶ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g