May 14, 2024

MALNAD TV

HEART OF COFFEE CITY

ಕೆರೆಯಲ್ಲಿ ಮೀನುಗಳ ಮಾರಣ ಹೋಮ, ಕಿಡಿಕೇಡಿಗಳ ಕುಕೃತ್ಯದ ಶಂಕೆ….?

1 min read

ಕಲುಷಿತಗೊಂಡ ಹಿನ್ನೆಲೆ ಸಾವಿರಾರು ಮೀನುಗಳ ಮಾರಣ ನಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಜೋಡಿಲಿಂಗದಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೆರೆ ನೀರು ಕಲುಷಿತಗೊಂಡಿದ್ದರಿಂದಲೇ ಮೀನುಗಳು ಸಾವನ್ನಪ್ಪಿವೆಯೋ ಅಥವಾ ಕಿಡಿಗೇಡಿಗಳು ಕೆರೆಗೆ ವಿಷ ಹಾಕಿದ್ದರಿಂದ ಮೀನುಗಳು ಸಾವನಪ್ಪಿದ್ದಾವೋ ಎಂಬುದು ಸ್ಪಷ್ಟವಿಲ್ಲ. ಆದರೆ, ಕೆರೆಯ ದಡದಲ್ಲಿ ಸಾವಿರಾರು ಮೀನುಗಳು ಸತ್ತು ತೇಲುತ್ತಿವೆ.‌ ಜೋಡಿ ಲಿಂಗದಹಳ್ಳಿಯ ನೂರಾರು ರೈತರು ಕೂಡ ಇದೇ ಕೆರೆ ನೀರನ್ನ ಉಪಯೋಗಿಸುತ್ತಿದ್ದರು.‌ ಸುಮಾರು 57 ಎಕರೆಯನ್ನ ಮೀನು ಸಾಕಾಣಿಕೆಗೆ ಗುತ್ತಿಗೆ ಪಡೆದು ಒಂದು ಲಕ್ಷಕ್ಕೂ ಅಧಿಕ ಮೀನುಗಳನ್ನ ಕೆರೆಗೆ ಬಿಡಲಾಗಿತ್ತು.‌ ಜಾನುವಾರಗಳು ಹಾಗೂ ಹಳ್ಳಿಗರು ನಿತ್ಯ ಉಪಯೋಗಕ್ಕೆ ಇದೇ ನೀರನ್ನ ಗ್ರಾಮಸ್ಥರು. ಇದೀಗ, ಕೆರೆಯಲ್ಲಿ ಮೀನುಗಳ ಸಾವಿನಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಕೆರೆಯಲ್ಲಿ ಮೀನುಗಳ ಸಾವಿನಿಂದ ಗ್ರಾಮದಲ್ಲಿ ಸಾಂಕ್ರಾಮಿಕ ರೋಗದ ಆತಂಕ ಕಾಡುತ್ತಿದ್ದು, ವೈಯಕ್ತಿಕ ದ್ವೇಷದ ಹಿನ್ನೆಲೆ ಕೆರೆಗೆ ವಿಷ ಹಾಕಿರುವ ಶಂಕೆ ವ್ಯಕ್ತವಾಗಿದೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!