ಬಸವಣ್ಣನವರ ಭಾವಚಿತ್ರ ವಿರೂಪಗೊಳಿಸಿರುವ ದುಷ್ಕರ್ಮಿಗಳ ವಿರುದ್ಧ ಸೂಕ್ತ ಕಾನೂನುಕ್ರಮಕ್ಕೆ ಆಗ್ರಹ
1 min read
ಚಿಕ್ಕಮಗಳೂರು: ಕನ್ನಡ ನಾಡಿಗೆ ಕಾಯಕ ದಾಸೋಹದ ಭದ್ರಬುನಾದಿಯನ್ನ ಹಾಕಿಕೊಟ್ಟ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ವಿರೂಪಗೊಳಿಸಿರುವ ದುಷ್ಕರ್ಮಿಗಳ ವಿರುದ್ಧ ಸರ್ಕಾರ ಸೂಕ್ತ ಕಾನೂನುಕ್ರಮ ಕೈಗೊಳ್ಳಬೇಕು ಎಂದು ಚಿಕ್ಕಮಗಳೂರು ಶ್ರೀ ಬಸವತತ್ವ ಪೀಠದ ಶ್ರೀ ಬಸವ ಮರಳಸಿದ್ಧ ಸ್ವಾಮೀಜಿ ಆಗ್ರಹಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಲ್ಲುರ್ಗಿ ಜಿಲ್ಲೆ, ಚಿತ್ತಾಪುರ ತಾಲ್ಲೂಕಿನ ಹಲಕರ್ಟಿಯಲ್ಲಿ ದುಷ್ಕರ್ಮಿಗಳು ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ವಿರೂಪಗೊಳಿಸಿ ವಿಕೃತಿ ಮೆರೆದಿದ್ದಾರೆ. ಸಾಮಾಜಿಕ ನ್ಯಾಯ, ಲಿಂಗ ಸಮಾನತೆಯನ್ನು ಅನುಷ್ಠಾನಕ್ಕೆ ತರುವ ಘನ ಉದ್ದೇಶದಿಂದ, ಜನ ಭಾಷೆಯಲ್ಲಿ ಧರ್ಮ-ಆಧ್ಯಾತ್ಮದ ಮೌಲ್ಯಗಳನ್ನು ಅನುಭವ ಮಂಟಪದ ಮೂಲಕ ಜಗತ್ತಿಗೆ ಪ್ರಜಾಪ್ರಭುತ್ವದ ಮಾದರಿಯನ್ನು ತೋರಿಸಿಕೊಟ್ಟವರು ವಿಶ್ವಗುರು ಬಸವಣ್ಣನವರು. ಸಾಮಾಜಿ-ಧಾರ್ಮಿಕ
ಕ್ರಾಂತಿಯ ಯುಗಪುರುಷರಾದ ಅವರು, ಲಿಂಗಾಯತ ಧರ್ಮದ ಸಂಸ್ಥಾಪಕರೂ ಹೌದು, ಪ್ರಸ್ತುತ ಕಿಡಿಗೇಡಿಗಳು ಬಸವಣ್ಣನವರ ಭಾವಚಿತ್ರವನ್ನು ವಿರೂಪಗೊಳಿಸಿರುವುದು, ದೇಶ ವಿದೇಶಗಳಲ್ಲಿರುವ ಬಸವ ಭಕ್ತರಿಗೆ ಆಘಾತ ಉಂಟುಮಾಡಿದೆ. ಇಂತಹ ದುಷ್ಟತ್ವ ಮಾಡಿದ ದುಷ್ಕರ್ಮಿಗಳಿಗೆ ಕಾನೂನಿನ ಮೂಲಕ ಶೀಘ್ರದಲ್ಲಿ ಶಿಕ್ಷೆವಿಧಿಸುವುದು ಆಗತ್ಯ ಮತ್ತು ಅನಿವಾರ್ಯ, ಈ ವಿಚಾರದಲ್ಲಿ ತಮ್ಮ ಸರ್ಕಾರ ತಡಮಾಡದೆ ದುಷ್ಕರ್ಮಿಗಳನ್ನು ಬಂಧಿಸಿ ಕಾನೂನು ಪ್ರಕ್ರಿಯೆಗಳಿಗೆ ಅವರನ್ನು ಒಳಪಡಿಸಬೇಕು. ಆ ಮೂಲಕ ಸಮಾಜದಲ್ಲಿ ಮುಂದೆ ಈ ರೀತಿಯ ಯಾವುದೇ ದುಷ್ಕೃತ್ಯಗಳು ನಡೆಯದಂತೆ ಮತ್ತು ಯಾವುದೇ ದಾರ್ಶನಿಕರಿಗೆ ಅವಮಾನವಾಗದಂತಹ ಘಟನೆಗಳು ನಡೆಯದಂತೆ ಸರ್ಕಾರ ಇವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಚಿಕ್ಕಮಗಳೂರಿನ ಬಸವಾಭಿಮಾನಿಗಳು ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮುಖಾಂತರ ಮನವಿಯನ್ನು ಸಲ್ಲಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g