ರಸ್ತೆ ದುರಸ್ತಿಗೆ ಒತ್ತಾಯ : ಹೋಬಳಿ ಬಂದ್ ಗೊಳಿಸಿ ಮಹಿಳೆಯರ ಪ್ರತಿಭಟನೆ
1 min read
ಹದಗೆಟ್ಟ ರಸ್ತೆ ದುರಸ್ತಿಗೆ ಆಗ್ರಹಿಸಿ ಗ್ರಾಮದ ಮಹಿಳೆಯರೇ ಹೋಬಳಿಯನ್ನು ಬಂದ್ ಗೊಳಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಮೂಡಿಗೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಆವತಿ ಗ್ರಾಮದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ವಾಹನಗಳನ್ನು ತಡೆದು ಗ್ರಾಮದ ಜನರು ಪ್ರತಿಭಟನೆ ನಡೆಸಿದರು. ಹೋಬಳಿ ಕೇಂದ್ರವಾದರೂ ಈ ಭಾಗದ ರಸ್ತೆಯು ದಶಕಗಳಿಂದ ದುರಸ್ತಿ ಕಂಡಿಲ್ಲ ಎಂದು ಆರೋಪಿಸಿದ ಗ್ರಾಮಸ್ಥರು ನಿತ್ಯ ಸರ್ಕಾರಿ ಬಸ್ಸು ಖಾಸಗಿ ಬಸ್ಸುಗಳು ಸೇರಿದಂತೆ ನೂರಾರು ವಾಹನಗಳು ಈ ಮಾರ್ಗದಲ್ಲಿ ಸಂಚರಿಸುತ್ತವೆ ಆದರೆ ನಿರಂತರ ಮಳೆಯಿಂದಾಗಿ ರಸ್ತೆ ತೀವ್ರ ಹದಗೆಟ್ಟಿದೆ, ಕ್ಷೇತ್ರದ ಶಾಸಕ ಎಂ ಪಿ ಕುಮಾರಸ್ವಾಮಿ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಮಾತ್ರ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ ಎಂದು ಆರೋಪಿಸಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಆವತಿ ಗ್ರಾಮದಲ್ಲಿ ಇಂದು ನಡೆಬೇಕಿದ್ದ ವಾರದ ಸಂತೆ ಸಹಾ ರದ್ದು ಮಾಡಲಾಗಿತ್ತು ಅಲ್ಲದೇ ಗ್ರಾಮದ ಪ್ರಮುಖ ರಸ್ತೆಯ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿತ್ತು, ಗ್ರಾಮದ ಮಹಿಳೆಯರೇ ಸೇರಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಸ್ಥಳೀಯ ಎಲ್ಲಾ ಗ್ರಾಮಸ್ಥರು ಬೆಂಬಲ ನೀಡಿದ್ದರು. ಅಲ್ಲದೇ ಬಿಜೆಪಿ ಹೊರತುಪಡಿಸಿ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು ಸಹಾ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g