April 29, 2024

MALNAD TV

HEART OF COFFEE CITY

ದತ್ತಜಯಂತಿ ಹಿನ್ನೆಲೆ 4000 ಕ್ಕೂ ಹೆಚ್ಚು ಪೊಲೀಸರ ನಿಯೋಜನೆ: ಎಸ್ಪಿ ಡಾ. ವಿಕ್ರಮ್ ಅಮಟೆ

1 min read

ಚಿಕ್ಕಮಗಳೂರು: ದತ್ತಜಯಂತಿ ಹಿನ್ನೆಲೆ 4000 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದ್ದು, ಕೋವಿಡ್ ಮಾರ್ಗಸೂಚಿ ಜೊತೆಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ವಿಕ್ರಮ್ ಅಮಟೆ ಹೇಳಿದ್ದಾರೆ.

ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 4000 ಸಾವಿರಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದ್ದು, ಕೊವಿಡ್ ಮಾರ್ಗಸೂಚಿಯಂತೆ ಎಲ್ಲಾ ಪೊಲೀಸರಿಗೆ ಕಡ್ಡಾಯವಾಗಿ ಮಾಸ್ಕ್ ಹಾಗೂ ಸ್ಯಾನಿಟೈಸರ್ ಕೊಡಲಾಗುವುದು ಎಂದರು. ಈ ಬಾರಿಯ ದತ್ತಜಯಂತಿಗೆ ಪೊಲೀಸ್ ಇಲಾಖೆ ವ್ಯಾಪಕ ಬಂದೋಬಸ್ತ್ ಮಾಡಿಕೊಂಡಿದ್ದು ಸಿಬ್ಬಂದಿ ನಿಯೋಜನೆ ಹಾಗೂ ಮುಂಜಾಗೃತಾ ಕ್ರಮದ ಬಗ್ಗೆ ಚಿಕ್ಕಮಗಳೂರು ಎಸ್ಪಿ ಡಾ. ವಿಕ್ರಮ್ ಅಮಟೆ ಸಂಪೂರ್ಣ ಮಾಹಿತಿ ನೀಡಿದ್ದಾರೆ.  ಜಿಲ್ಲೆಯ ಗಡಿಭಾಗದಲ್ಲಿ 28 ಚೆಕ್ ಪೋಸ್ಟ್ ಗಳನ್ನು ನಿರ್ಮಿಸಲಾಗಿದ್ದು 300 ಕ್ಕೂ ಹೆಚ್ಚು ಸಿ.ಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ, 7 ಜನ ಅಡಿಷನಲ್ ಎಸ್ಪಿಗಳು 30 ಡಿವೈಎಸ್.ಪಿ ಗಳು 60 ಇನ್ಸ್‌ಪೆಕ್ಟರ್ ಗಳು ಅಲ್ಲದೇ ಡಿ.ಎ.ಅರ್, ಕೆ.ಎಸ್.ಆರ್.ಪಿ ತುಕುಡಿಗಳು ಹೋಂ ಗಾರ್ಡ್ ಗಳು ಸೇರಿದಂತೆ ಮೆಡಿಕಲ್ ಟೀಂಗಳು ಕಾರ್ಯನಿರ್ವಹಿಸಲಿದ್ದಾರೆ ಎಂದು ಎಸ್ಪಿ ವಿಕ್ರಮ್ ಅಮಟೆ ತಿಳಿಸಿದ್ದಾರೆ. ಇದಲ್ಲದೇ ನಾಳೆಯಿಂದ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದ್ದು ಪ್ರವಾಸಿಗರು ಭೇಟಿಯನ್ನು ಮುಂದೂಡುವಂತೆ ಎಸ್ಪಿ ಮನವಿ ಮಾಡಿದ್ದಾರೆ. ಚಿಕ್ಕಮಗಳೂರು ನಗರದಲ್ಲಿ ಕೆಲ ರಸ್ತೆಗಳ ಮಾರ್ಗ ಕೂಡಾ ಬದಲಿಸಿದ್ದು ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಿರುವ ಬಗ್ಗೆ ಸಹಾ ತಿಳಿಸಿದ ಅವರು ವಾಹನ ಪಾರ್ಕಿಂಗ್ ನಿಷೇಧ ಇರುವ ಸ್ಥಳಗಳು ಯಾವುದು ಎಂಬ ಮಾಹಿತಿ ಸಹಾ ನೀಡಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!