ಕಿಡಿಗೆಡಿಗಳಿಂದ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ : ಆರೋಪಿಗಳ ಬಂಧನಕ್ಕೆ ಒತ್ತಾಯ
1 min readಶೃಂಗೇರಿ : ಕಿಡಿಗೆಡಿಗಳು K.E.B ಕಚೇರಿಯಲ್ಲಿದ್ದ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ಶಂಗೇರಿ ತಾಲೂಕಿನ ಕೆ.ಇ.ಬಿ. ಕಛೇರಿಯಲ್ಲಿ ನಡೆದಿದೆ.
ಶೃಂಗೇರಿ ಪಟ್ಟಣದ ಕೆ.ಇ.ಬಿ. ಕಛೇರಿಯಲ್ಲಿದ್ದ ಅಂಬೇಡ್ಕರ್ ಭಾವಚಿತ್ರಕ್ಕೆ ಯಾರೋ ಕಿಡಿಗೇಡಿಗೇಡಿಗಳು ಚಪ್ಪಲಿಯಿಂದ ಹೊಡೆದಿದ್ದಾರೆ. ಎಂದಿನಿಂತೆ ಕಛೇರಿ ತೆರೆದು ಕಾರ್ಯ ನಿರ್ವಹಿಸುತ್ತಿದ್ದಾಗ, ಕಛೇರಿಯಲ್ಲಿದ್ದ ಅಂಬೇಡ್ಕರ್ ಭಾವಚಿತ್ರವನ್ನು ಗಮನಿಸಿದ ಕಚೇರಿ ಸಿಬ್ಬದಿಂಗಳಿಗೆ ಅಂಬೇಡ್ಕರ್ ಭಾವಚಿತ್ರದಲ್ಲಿ ಚಪ್ಪಲಿ ಗುರುತು ಕಾಣಿಸಿದೆ, ಸುದ್ದಿ ತಿಳಿದ ದಲಿತ ಸಂಘಟನೆಗಳು ಕಛೇರಿಗೆ ಆಗಮಿಸಿ ಆಕ್ರೋಶ ವ್ಯಕ್ತ ಪಡಿಸಿದರಲ್ಲದೆ, ಅಂಬೇಡ್ಕರ್ ಭಾವಚಿತ್ರವನ್ನು ಶುದ್ದಗೊಳಿಸಿ ಹೂ ಮಾಲೆ ಹಾಕಿದರು. ಈ ಕೃತ್ಯದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ದಲಿತ ಸಂಘಟನೆಗಳ ಮುಖಂಡರು ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದರು. ಪ್ರಕರಣ ಶೃಂಗೇರಿ ಪೋಲೀಸ್ ಠಾಣೆಯಲ್ಲಿ ದಾಖಲಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g