April 29, 2024

MALNAD TV

HEART OF COFFEE CITY

ಡಿ.3. ರಂದು ದೇವರಾಜ್ ಕಾಂಗ್ರೆಸ್ ಸೇರ್ಪಡೆ

1 min read

ಚಿಕ್ಕಮಗಳೂರು: ಜಾತ್ಯತೀತ ಜನತಾದಳದಿಂದ ಹೊರಬಂದಿರುವ ಎಚ್.ಎಚ್.ದೇವರಾಜ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಡಿ.3.ರಂದು ನಗರದ ವಕ್ಕಲಿಗರ ಸಮುದಾಯ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ.ವಿಧಾನಪರಿಷತ್ ಚುನಾವಣೆ ಹಿನ್ನಲೆಯಲ್ಲಿ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಗರಕ್ಕೆ ಆಗಮಿಸುತ್ತಿದ್ದು, ಅವರ ಸಮ್ಮುಖದಲ್ಲಿ ಜಾತ್ಯತೀತ ಜನತಾದಳ ರಾಜ್ಯ ಉಪಾಧ್ಯಕ್ಷರಾಗಿದ್ದ ಎಚ್.ಎಚ್.ದೇವರಾಜ್ ಅಧಿಕೃತವಾಗಿ ಕಾಂಗ್ರೆಸ್ ಸೇರುವರು.
ತಮ್ಮ ಬೆಂಬಲಿಗರೊoದಿಗೆ ತೆರಳಿ ಕೆಪಿಸಿಸಿ ರಾಜ್ಯಾಧ್ಯಕ್ಷರೊಂದಿಗೆ ಮಾತುಕತೆ ನಡೆಸಿದ್ದು, ದೇವರಾಜ್ ಅವರಿಗೆ ಹೂವುಗುಚ್ಚನೀಡಿ ಬರಮಾಡಿಕೊಳ್ಳಲಾಯಿತು. ಕೆಪಿಸಿಸಿ ವಕ್ತಾರ ಡಾ.ಬಿ.ಎಲ್.ಶಂಕರ್, ಜಿಲ್ಲಾಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಎಲ್.ಮೂರ್ತಿ, ಜಿಲ್ಲಾಪಂಚಾಯಿತಿ ಮಾಜಿ ಅಧ್ಯಕ್ಷ ಎ.ಎನ್.ಮಹೇಶ್ ಇದ್ದರು.
ವಕ್ಕಲಿಗರ ಸಮುದಾಯ ಭವನದಲ್ಲಿ ಡಿ.3. ರಂದು ನಡೆಯುವ ಕಾರ್ಯಕ್ರಮದಲ್ಲಿ ದೇವರಾಜ್ ತಮ್ಮ ೧೦೦೦ಕ್ಕೂ ಅಧಿಕ ಬೆಂಬಲಿಗರೊoದಿಗೆ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಿದ್ದು, ಜಾತ್ಯತೀತ ಜನತಾದಳ ಯುವ ವಿಭಾಗದ ಜಿಲ್ಲಾಧ್ಯಕ್ಷ ದೇವರಾಜ್ ಅವರ ಮಗ ವಿನಯರಾಜ್‌ಕೂಡ ಯುವಕರೊಂದಿಗೆ ಕಾಂಗ್ರೆಸ್ ಸೇರ್ಪಡೆಗೊಳ್ಳುವರು.ಈಗಾಗಲೇ ಮುಂದಿನ ವಿಧಾನಸಭಾ ಚುನಾವಣೆಗೆ ಮೂಡಿಗೆರೆ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿರುವ ಬಿ.ಬಿ.ನಿಂಗಯ್ಯ ತಕ್ಷಣ ಕ್ಷೇತ್ರದ ಪ್ರಮುಖರು ಮತ್ತು ಕಾರ್ಯಕರ್ತರ ಸಭೆ ಕರೆದು ಚರ್ಚೆ ನಡೆಸಲು ಮುಂದಾಗದಿದ್ದರೆ, ವಸ್ತಾರೆ, ಆವತಿಹೋಬಳಿಯ ಕೆಲವು ಮುಖಂಡರು ದೇವರಾಜ್ ಅವರೊಂದಿಗೆ ಕಾಂಗ್ರೆಸ್ ಸೇರಲಿದ್ದಾರೆ.ಳ್ಳಲಿದ್ದಾರೆ.ವಿಧಾನಪರಿಷತ್ ಚುನಾವಣೆ ಹಿನ್ನಲೆಯಲ್ಲಿ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಗರಕ್ಕೆ ಆಗಮಿಸುತ್ತಿದ್ದು, ಅವರ ಸಮ್ಮುಖದಲ್ಲಿ ಜಾತ್ಯತೀತ ಜನತಾದಳ ರಾಜ್ಯ ಉಪಾಧ್ಯಕ್ಷರಾಗಿದ್ದ ಎಚ್.ಎಚ್.ದೇವರಾಜ್ ಅಧಿಕೃತವಾಗಿ ಕಾಂಗ್ರೆಸ್ ಸೇರುವರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!