May 21, 2024

MALNAD TV

HEART OF COFFEE CITY

ಶ್ರೀಗಂಧ ಕದಿಯಲು ಬಂದವರನ್ನ ಹೊಡೆದು ಕೊಂದರಾ ಅರಣ್ಯ ಅಧಿಕಾರಿಗಳು….. ?

1 min read

ಚಿಕ್ಕಮಗಳೂರು : ಶ್ರೀಗಂಧವನ್ನ ಕದಿಯಲು ಬಂದಿದ್ದ ಕಳ್ಳರನ್ನ ಅರಣ್ಯ ಅಧಿಕಾರಿಗಳು ಹೊಡೆದು ಕೊಂದರಾ ಎಂಬ ಅನುಮಾನ ವ್ಯಕ್ತವಾಗಿದೆ. ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಸಮೀಪದ ಕೋಟೆ ಎಂಬ ಗ್ರಾಮದ ಆನೆ ಹಿಮ್ಮೆಟ್ಟಿಸುವ ಶಿಬಿರದ ಶೌಚಾಲಯದಲ್ಲಿ ಮೃತದೇಹವೊಂದು ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ. ಆನೆ ಶಿಬಿರದ ಶೌಚಾಲಯದಲ್ಲಿ ವ್ಯಕ್ತಿಯ ಶವ ನೋಡಿದ ಊರಿನ ಜನ ಅಧಿಕಾರಿಗಳ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಆತ ಶ್ರೀಗಂಧ ಕಳ್ಳ ಅನ್ನೋದೆ ಆದರೆ ಕಡಿದಿರುವ ಶ್ರೀಗಂಧ ಎಲ್ಲಿದೆ ತೋರಿಸಿ ಎಂದು ಸ್ಥಳಿಯರು ಅಧಿಕಾರಿಗಳಿಗೆ ಪ್ರಶ್ನೆ ಮಾಡಿದ್ದಾರೆ. ಕಳ್ಳನಾಗಿದ್ದರೆ ಕಾನೂನು ಕ್ರಮ ಕೈಗೊಳ್ಳಬಹುದಿತ್ತು. ಅದನ್ನ ಬಿಟ್ಟು ಯಾಕೆ ಕೊಂದಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಗಂಧದ ಕಳ್ಳತನಕ್ಕೆಂದು ಶಿವಮೊಗ್ಗ ಮೂಲದ ಐವರ ಗ್ಯಾಂಗ್ ಸಖರಾಯಪಟ್ಟಣದ ಕಾಡಿಗೆ ಬಂದಿದ್ದರು. ಅವರನ್ನ ಬೆನ್ನಟ್ಟಿದ್ದ ಅರಣ್ಯ ಇಲಾಖೆ ಸಿಬ್ಬಂದಿಗಳು ಇಬ್ಬರನ್ನ ವಶಕ್ಕೆ ಪಡೆದಿದ್ದರು. ಅವರನ್ನ ಕ್ವಾಟ್ರಸ್‍ಗೆ ಕರೆತಂದು ಅರಣ್ಯ ಇಲಾಖೆ ಸಿಬ್ಬಂದಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.

ಹೀಗೆ ವಿಚಾರಣೆ ಮಾಡುವ ಸಂದರ್ಭದಲ್ಲಿ ಹೊಸಪೇಟೆಯ ಫಾರೆಸ್ಟ್ ಕ್ವಾಟ್ರಸ್‍ನಲ್ಲಿ ವ್ಯಕ್ತಿಯನ್ನ ಹೊಡೆದು ಸಮೀಪದ ಕೋಟೆ ಗ್ರಾಮದ ಆನೆ ಶಿಬಿರದ ಶೌಚಾಲಯದಲ್ಲಿ ತಂದಿಟ್ಟಿದ್ದಾರೆ ಎಂದು ಸ್ಥಳಿಯರು ಆರೋಪಿಸಿದ್ದಾರೆ. ಕ್ವಾಟ್ರಸ್‍ನಲ್ಲಿ ಒಬ್ಬ ಇದ್ದಾನೆ. ಮತ್ತೊಬ್ಬ ಎಲ್ಲಿ ಎಂದು ಪ್ರಶ್ನಿಸಿದ್ದಾರೆ. ಯಾವಾಗ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತೋ ಆ ಸ್ಥಳದಲ್ಲಿ ಖಾಕಿ ಪಡೆಯ ಸಂಖ್ಯೆಯನ್ನೂ ಹೆಚ್ಚು ಮಾಡಲಾಯಿತು. ಡಿವೈಎಸ್ಪಿ, ನಾಲ್ಕು ಮಂದಿ ಸರ್ಕಲ್, 5 ಮಂದಿ ಪಿಎಸ್‍ಐ ಗಳು ಸೇರಿದಂತೆ 50ಕ್ಕೂ ಹೆಚ್ಚು ಪೆÇಲೀಸರು ಸ್ಥಳದಲ್ಲಿ ಬೀಡುಬಿಟ್ಟದ್ದರು. ಮೃತಪಟ್ಟಿರೋ ವ್ಯಕ್ತಿ ಶಿವಮೊಗ್ಗ ಮೂಲದ ರವಿ ಎಂಬಾತ. ಈತ ಸೇರಿದಂತೆ 5 ಮಂದಿ ಶ್ರೀಗಂಧ ಕಳವಿಗೆ ಬಂದಿದ್ದರು. ನಮ್ಮವರು ಅವರನ್ನ ವಶಕ್ಕೆ ಪಡೆದಿದ್ದಾರೆ. ಸ್ಥಳೀಯರ ಆರೋಪದ ಕುರಿತು ತನಿಖೆ ನಡೆಸೋದಾಗಿ ಡಿ.ಎಫ್.ಓ. ಕ್ರಾಂತಿ ತಿಳಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!