ಮರ ಸುತ್ತುವ ಮೂಲಕ ರೈತ ಮುಖಂಡನ ವಿಭಿನ್ನ ಪ್ರತಿಭಟನೆ
1 min readಚಿಕ್ಕಮಗಳೂರು: ಪಹಣಿ ದೋಷ ನಿವಾರಣೆಗೆ ಸತಾಯಿಸುತ್ತಿರುವ ಕಂದಾಯ ಇಲಾಖೆ ವಿರುದ್ಧ ರೈತ ಮುಖಂಡ ಮಂಜುನಾಥ್ ಡಿ.ಸಿ ಕಚೇರಿ ಬಳಿಯ ಮರ ಸುತ್ತುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.
“ಅಧಿಕಾರಿಗಳ ಚಾಟಿ ರೈತರ ಮೇಲೆ” ಎಂದು ಬರೆದಿರುವ ಪೋಸ್ಟರ್ ತಮ್ಮ ದೇಹಕ್ಕೆ ಕಟ್ಟಿಕೊಂಡು ಸರ್ಕಾರದ ಗಮನ ಸೆಳೆಯುವ ರೀತಿಯಲ್ಲಿ ಭಿನ್ನ ಪ್ರತಿಭಟನೆ ನಡೆಸುತ್ತಿರುವ ಮಂಜುನಾಥ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿ.ಸಿ ಯವರಿಗೆ ಬೆಲೆ ಇಲ್ಲದಂತಾಗಿದೆ. ಕಚೇರಿಯ ಸಿಬ್ಬಂದಿಗಳೇ ಇಲ್ಲಿ ಅಧಿಕಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿ ಚಲನೆ ಇಲ್ಲದ ಸ್ಥಿತಿಯಲ್ಲಿದ್ದು, ಮರ ಸುತ್ತಿದರೆ ಏನು ಪ್ರಯೋಜನ ಆಗುವುದಿಲ್ಲವೋ ಅದೇ ರೀತಿಯಲ್ಲಿ ಡಿ.ಸಿ ಕಚೇರಿ ಸುತ್ತಿದರೂ ಪ್ರಯೋಜನ ಇಲ್ಲದಂತಾಗಿದೆ ಎಂದು ಅವರು ಹೇಳಿದ್ದಾರೆ. ಪಹಣಿಯಲ್ಲಿನ ದೋಷ ನಿವಾರಣೆಗೆ ಪೋಡು ಪ್ರಕರಣಗಳನ್ನು ಅಡ್ಡ ತರುತ್ತಿದ್ದಾರೆ, ಇದು ಕಾನೂನು ಬಾಹಿರ ವಾಗಿದ್ದು ಪಹಣಿ ಪೋಡು ಎರಡಕ್ಕೂ ಒಂದಕ್ಕೊಂದು ಸಂಬಂಧ ಕಲ್ಪಿಸಿ ಹಿಂಬರಹ ಕೊಡುತ್ತಿದ್ದಾರೆ ಎಂದು ರೈತ ಮುಖಂಡ ಮಂಜುನಾಥ್ ತಿಳಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g