ವರ್ಗಾವಣೆಗೊಂಡ ಶಿಕ್ಷಕ, ಕಣ್ಣೀರಿಟ್ಟ ಮಕ್ಕಳು
1 min readತಮ್ಮ ನೆಚ್ಚಿನ ಶಿಕ್ಷಕರು ವರ್ಗಾವಣೆಗೊಂಡು ಬೇರೊಂದು ಶಾಲೆಗೆ ಹೋಗುವ ವೇಳೆ ಮಕ್ಕಳು ಶಿಕ್ಷಕರಿಗೆ ಕಣ್ಣೀರಿನ ವಿದಾಯ ಹೇಳಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಸಂಸ್ಥೆ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಸಂಸೆ ಸರ್ಕಾರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ಸಲೀಂ ಜಾವೇದ್ ಕಳೆದ 12 ವರ್ಷಗಳಿಂದ ಸಂಶಯ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಇದೀಗ ಅವರಿಗೆ ಎನ್.ಆರ್. ಪುರ ತಾಲೂಕಿನ ಮಾಗುಂಡಿ ಸರ್ಕಾರಿ ಪ್ರೌಢಶಾಲೆಗೆ ವರ್ಗಾವಣೆಯಾಗಿದೆ.
ಈ ವೇಳೆ ಮಕ್ಕಳು ಸಾಲಾಗಿ ನಿಂತು ಶಿಕ್ಷಕರ ಕಾಲು ಮುಟ್ಟಿ ನಮಸ್ಕರಿಸಿ ಕಣ್ಣೀರಿನ ಬೀಳ್ಕೊಡುಗೆ ಕೊಟ್ಟಿದ್ದಾರೆ. ಮಕ್ಕಳ ಪ್ರೀತಿ ಕಂಡು ಶಿಕ್ಷಕ ಸಲೀಂ ಜಾವಿದ್ ಕೂಡ ಮಕ್ಕಳಲ್ಲಿ ಮಕ್ಕಳಾಗಿ ಕಣ್ಣೀರಿಟ್ಟಿದ್ದಾರೆ. 12 ವರ್ಷಗಳಿಂದ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಕಾರಣರಾಗಿದ್ದ ಸಲೀಂ ಅವರ ವರ್ಗಾವಣೆಗೆ ಶಿಕ್ಷಕ ವೃಂದ ಕೂಡ ಕಣ್ಣೀರಿಟ್ಟಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g