April 28, 2024

MALNAD TV

HEART OF COFFEE CITY

ಮತದಾರರಿಗೆ ಶಾಸಕರಿಂದ ಅಗೌರವ; ಮರ್ಲೆ ಅಣ್ಣಯ್ಯ

1 min read

ಚಿಕ್ಕಮಗಳೂರು: ಎಲ್ಲರನ್ನ ಸಮಾನವಾಗಿ ಕಾಣಬೇಕಾಗಿದ್ದ ಜಿಲ್ಲೆಯ ಶಾಸಕರು ಪ್ರಾಮಾಣಿಕ ಮತದಾರರನ್ನು ಅಗೌರವಿಸಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘಟನೆ ಐಕ್ಯತಾ ಚಾಲನಾ ಸಮಿತಿಯ ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ ಒತ್ತಾಯಿಸಿದರು.
ನಗರದ ಜಿಲ್ಲಾ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿ ಮಾತನಾಡಿದ ಅವರು ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರಾದ ಹೆಚ್.ಡಿ ತಮ್ಮಯ್ಯನವರು ಸರ್ವರನ್ನು ಸಮಾನವಾಗಿ ಕಾಣುತ್ತೇನೆ ಮತ್ತು ನಮಗಾಗಿ ದುಡಿದವರ ಕೆಲಸಗಳನ್ನು ಮಾಡಿಕೊಡುವುದಾಗಿ ಭರವಸೆ ನೀಡಿದ್ದರು ಆದರೆ ಸತತವಾಗಿ ಐದು ತಿಂಗಳು ಕಳೆದರೂ ಇವರಿಗೂ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಬದಲಾಗಿ ಕಳೆದ ಎರಡು ದಿನಗಳ ಹಿಂದೆ ವಿದ್ಯಾರ್ಥಿ ಮತ್ತು ಸ್ವಾಮೀಜಿಗಳ ಕಾರ್ಯಕ್ರಮ ಒಂದರಲ್ಲಿ ನಾನು ಸ್ವಾಮೀಜಿಯವರಿಂದ ಗೆದ್ದಿದ್ದೇನೆ ಎಂದು ಹೇಳುವುದರ ಜೊತೆಗೆ ಮತ ಹಾಕಿದ ಪ್ರಾಮಾಣಿಕರನ್ನ ಅಗೌರವಿಸಲಾಗಿದೆ. ಅಷ್ಟೇ ಅಲ್ಲದೆ ತಮ್ಮಯ್ಯನವರು ನನ್ನ ಜಾತಿಯವರನ್ನು ಆಯಾ ಕಟ್ಟಿನ ಜಾಗಗಳಲ್ಲಿ ಅಧಿಕಾರ ನೀಡಿ ನನ್ನ ಜನಾಂಗದವರ ಕೆಲಸಗಳನ್ನು ಮಾಡುವಂತೆ ಸೂಚಿಸುದ್ದೇನೆ ಎಂದು ಹೇಳಿರುವುದು ಖಂಡನೀಯ ಮತ್ತು ಸ್ವಾರ್ಥದ ರಾಜಕಾರಣ ಎಂದು ಸ್ಪಷ್ಟವಾಗಿ ಕಾಣುತ್ತಿದೆ ಎಂದು ವಿರೋಧ ವ್ಯಕ್ತಪಡಿಸಿದರು.
ಈ ರೀತಿಯ ಹೇಳಿಕೆ ನೀಡಿರುವುದರ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು ಗಮನಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಭೇದ ಮರೆತು ಅಹಿಂದ ವರ್ಗಗಳಲ್ಲಿ ದಲಿತ ಅಲ್ಪಸಂಖ್ಯಾತರ ಅಭಿವೃದ್ಧಿ ಕಾರ್ಯಗಳನ್ನು ಮಾಡಿಕೊಡಬೇಕಾಗಿ ಒತ್ತಾಯಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!