ಕೋವಿಡ್ ೧೯ ರ ಎರಡನೇ ಅಲೆ ಅತ್ಯಂತ ವೇಗವಾಗಿ ಹರಡುತ್ತಿದ್ದು, ಇದರ ನಿಯಂತ್ರಣಕ್ಕಾಗಿ ಸರ್ಕಾರ ಕಟ್ಟು ನಿಟ್ಟಿನ ಆದೇಶವನ್ನು ಜಾರಿಗೊಳಿಸಿದೆ
1 min readಕೋವಿಡ್ ೧೯ ರ ಎರಡನೇ ಅಲೆ ಅತ್ಯಂತ ವೇಗವಾಗಿ ಹರಡುತ್ತಿದ್ದು, ಇದರ ನಿಯಂತ್ರಣಕ್ಕಾಗಿ ಸರ್ಕಾರ ಕಟ್ಟು ನಿಟ್ಟಿನ ಆದೇಶವನ್ನು ಜಾರಿಗೊಳಿಸಿದೆ.
ಚಿಕ್ಕಮಗಳೂರು ಜಿಲ್ಲಾಧ್ಯಂತ ಲಾಕ್ಡೌನ್ ಮಾಡಲು ಜಿಲ್ಲಾಡಳಿತ ನಿರ್ಧಾರ ಕೈಗೊಂಡಿದೆ. ಇಂದಿನಿAದ ಮೇ ೪ ವರೆಗೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುವಂತೆ ಸೂಚಿಸಲಾಗಿದೆ. ಈ ಆದೇಶ ಹೊರ ಬೀಳುತ್ತಿದ್ದಂತೆ ಇಂದು ಮಧ್ಯಾಹ್ನ ಅಧಿಕಾರಿಗಳು ಏಕಾಏಕಿ ನಗರದ ಎಂ.ಜಿ ರಸ್ತೆ ಸೇರಿದಂತೆ ಇನ್ನೂ ಹಲವೆಡೆ ಅಂಗಡಿ ಮುಂಗಟ್ಟುಗಳ ಬಾಗಿಲು ಮುಚ್ಚಿಸಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮೆಡಿಕಲ್, ದಿನಸಿ ಅಂಗಡಿ, ಹಣ್ಣು ತರಕಾರಿ, ಮೀನು ಮಾಂಸ ಹಾಗೂ ಮಧ್ಯದ ಅಂಗಡಿಗಳಿಗೆ ವಿನಾಯಿತಿ ನೀಡಲಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g