May 8, 2024

MALNAD TV

HEART OF COFFEE CITY

ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ರೈತ ಮುಖಂಡರ ಸಾವು

1 min read

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಸಾವನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.

ನವಲಗುಂದದಿಂದ ಬೇಲೂರಿಗೆ ಹೋಗುತ್ತಿದ್ದ ವೇಳೆ ಚಿಕ್ಕಮಗಳೂರು ನಗರದ ರಾಮನಹಳ್ಳಿ ಬಳಿ ಅಪಘಾತ ನಡೆದಿದೆ. ಈ ಅಪಘಾತದಿಂದ ಕಾರಿನಲ್ಲಿದ್ದ ರೈತ ಮುಖಂಡರುಗಳಾದ ರಾಮಸ್ವಾಮಿ ಹಾಗೂ ರಾಮಪ್ಪ ಸಾವನಪ್ಪಿದ್ದಾರೆ. ರಾಮನಗರ ಮೂಲದವರಾದ 70 ವರ್ಷದ ರಾಮಸ್ವಾಮಿ ರಾಜ್ಯ ರೈತ  ಸಂಘದ ಉಪ್ಯಾಧ್ಯಕ್ಷರಾಗಿ ಹಾಗೂ ಹಾಸನ ಜಿಲ್ಲೆಯ ಬೇಲೂರಿನ ಮೂಲದವರಾದ 50 ವರ್ಷದ ರಾಮಪ್ಪ ರಾಜ್ಯ ರೈತ ಸಂಘ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಕಾರಿನಲ್ಲಿದ್ದ ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಚಿಕ್ಕಮಗಳೂರು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!