ತಳ್ಳೋ ಮಾಡೆಲ್ ಗಾಡಿ ಇದು ತಳ್ಳಿ ಬಿಡಪ್ಪ : ಪೆಟ್ರೋಲ್ ಬೆಲೆ ಏರಿ ಹೋಯ್ತು ಎದ್ದು ದೂಡಪ್ಪ
1 min readಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಮತ್ತೊಮ್ಮೆ ಬೀದಿಗಿಳಿದಿದೆ. ವಿನೂತನ ರೀತಿಯ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕಾರಿಗೆ ಹಗ್ಗವನ್ನು ಕಟ್ಟಿ ಎಳೆಯುವ ಮೂಲಕ ರಾಜ್ಯ ಸರ್ಕಾರ ತೈಲ ಬೆಲೆ ಏರಿಸಿದ ನೀತಿಯನ್ನು ವ್ಯಂಗ್ಯವಾಡಿ ಆಕ್ರೋಶ ವ್ಯಕ್ತಪಡಿಸಿದೆ.
ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ಖಂಡಿಸಿ ಚಿಕ್ಕಮಗಳೂರು ನಗರದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು. ಬಿಜೆಪಿ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದು ವಿಶೇಷವಾಗಿತ್ತು. ಆಶ್ಚರ್ಯ ಪಡಬೇಡಿ ಪ್ರತಿಭಟನೆ ಯಲ್ಲಿ ಸಿದ್ದು ಮುಖವಾಡ ಧರಿಸಿದ್ದು ಬಿಜೆಪಿ ಕಾರ್ಯಕರ್ತ,,,, ಕಾರಿಗೆ ಹಗ್ಗ ಕಟ್ಟಿಕೊಂಡು ಎಳೆದು ಪ್ರತಿಭಟನೆ ನಡೆಸಲಾಯಿತು. ಗ್ಯಾರಂಟಿಗೆ ಹಣ ಹೊಂದಿಸಲು ಬೆಲೆ ಏರಿಕೆ ಎಂದು ಆಕ್ರೋಶ ಸಹಾ ವ್ಯಕ್ತಪಡಿಸಿದರು.
100ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತ ಸಮೂಹ ಭಾಗಿಯಾಗಿತ್ತು, ಬಡವರ ಹೊಟ್ಟೆ ಮೇಲೆ ಬರೆ ಎಳೆಯುತ್ತಿರುವ ಸರ್ಕಾರ ಎಂದು ಕಿಡಿಕಾರಿದರು.
ಮೊನ್ನೆಯಷ್ಟೆ ಕಿವಿಗೆ ಹೂ ಇಟ್ಟು ಕೊಂಡು, ಖಾಲಿ ತೆಂಗಿನ. ಚಿಪ್ಪು ಹಾಗೂ ಚೆಂಬು ಹಿಡಿದು ಪ್ರತಿಭಟನೆ ನಡೆಸಿದ್ದ ಬಿಜೆಪಿ ಇಂದು ಕಾರಿಗೆ ಹಗ್ಗ ಕಟ್ಟಿ ಎಳೆದು ವಿಭಿನ್ನ ಪ್ರತಿಭಟನೆ ನಡೆಸಿದರು. ವಾಹನಗಳಿಗೆ ಕಾಂಗ್ರೆಸ್ ಚೆಂಬು ಕೊಡ್ತು ಅಂತ ವ್ಯಂಗ್ಯ ಮಾಡಿದ್ದ ಬಿಜೆಪಿ ತಾಲೂಕು ಕಚೇರಿಯಿಂದ ಆಜಾದ್ ಪಾರ್ಕ್ ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿತು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g