May 15, 2024

MALNAD TV

HEART OF COFFEE CITY

ಪಿಯುಸಿ ಪರೀಕ್ಷೆ ಹಿನ್ನೆಲೆ ಪರೀಕ್ಷಾ ಕೇಂದ್ರಕ್ಕೆ ಭೇಟಿ ಪರಿಶೀಲನೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್

1 min read

ಇಂದಿನಿಂದ ಪಿಯುಸಿ ಪರೀಕ್ಷೆ ಹಿನ್ನೆಲೆ .ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಗರದ ಜೂನಿಯರ್ ಕಾಲೇಜಿನಲ್ಲಿರುವ ಪರೀಕ್ಷಾ ಕೇಂದ್ರಕ್ಕೆ ಭೇಟಿ ಪರೀಕ್ಷಾ ಕೊಠಡಿಗಳ ಪರಿಶೀಲನೆ ನಡೆಸಿದದ ಸಚಿವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ 9671 ಹದಿನೆಂಟು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ಪರೀಕ್ಷೆ ಪರೀಕ್ಷೆ ಎದುರಿಸಲಿರುವ 4597 ಬಾಲಕರು, 5074 ಬಾಲಕಿಯರು

ಯಾವುದೇ ಶಾಲೆ ಮುಚ್ಚುವ ಪ್ರಶ್ನೆ ಇಲ್ಲ,ವಿಲೀನ ಅಷ್ಟೇ: ಬಿ.ಸಿ ನಾಗೇಶ್

ಚಿಕ್ಕಮಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆ ನಗರದ ಜ್ಯೂನಿಯರ್ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಭೇಟಿ ನೀಡಿದರು. ಈ ವೇಳೆ ಕೆಲಕಾಲ ವಿದ್ಯಾರ್ಥಿಗಳ ಜೊತೆ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಕೂಲ್ ಆಗಿ ಪರೀಕ್ಷೆ ಬರೆಯುವಂತೆ ಧೈರ್ಯ ತುಂಬಿದರು. ಬಳಿಕ ಪರೀಕ್ಷಾ ಕೇಂದ್ರಗಳಿಗೆ ತೆರಳಿ ವೀಕ್ಷಣೆ ಮಾಡಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.ಈ ವೇಳೆ ಮಾತನಾಡಿದ ಅವರು ಉರ್ದು ಶಾಲೆ ಮುಚ್ಚುವ ಚಿಂತನೆ ಇಲ್ಲ ಉತ್ತಮ ಶಿಕ್ಷಣ ನೀಡುವ ಉದ್ದೇಶದಿಂದ ಒಂಟಿ ಶಾಲೆಗಳನ್ನು ವಿಲೀನ ಮಾಡಲಾಗುವುದು ಎಂದರು.

ಇದೇ ವೇಳೆ ಮಾತನಾಡಿದ ಅವರು ಕಲಿಕೆ ಹಾಗೂ ಮಕ್ಕಳ ನಡುವೆ ಪ್ರತಿಸ್ಪರ್ಧೆ ಉತ್ತಮ ನೀಡುವ ಉದ್ದೇಶದಿಂದ ಶಾಲೆಗಳನ್ನು ವಿಲೀನ ಮಾಡಲಾಗುವುದು ಎಂದು ತಿಳಿಸಿದರು.

ಕನ್ನಡ ಶಾಲೆ,ಉರ್ದು,ಮರಾಠ ತಮಿಳು ಶಾಲೆ ಯಾವುದೇ ಇದ್ರು ಸಹ ವಿಲೀನ ಮಾಡಲಾಗುವುದು ಯಾವುದೇ ಶಾಲೆ ಮುಚ್ಚುವ ಚಿಂತನೆ ಇಲ್ಲ ಎಂದರು

ಇನ್ನು ಇದೇ ವೇಳೆ ಪಿಯುಸಿ ಪರೀಕ್ಷೆ ಕುರಿತು ಮಾತನಾಡಿದ ಅವರು, ಮಕ್ಕಳು ತುಂಬಾ ವಿಶ್ವಾಸದಲ್ಲಿದ್ದು ಅವರಿಗೆ ಧೈರ್ಯ ತುಂಬು ಆಲ್ ದಿ ಬೆಸ್ಟ್ ಹೇಳಿದ್ದೇನೆ. ರಾಜ್ಯದಲ್ಲಿ ಬಾಲಕರು ಹಾಗೂ ಬಾಲಕಿಯರು ಒಂದೇ ಸಮಪಾಲಿನಲ್ಲಿ ಪರೀಕ್ಷೆ ಬರೆಯುತ್ತಿದ್ದು ಅಧಿಕಾರಿಗಳ ಮೇಲೆ ಉತ್ತಮ ರೀತಿಯಲ್ಲಿ ಪರೀಕ್ಷೆ ನಡೆಸಿಕೊಡುತ್ತಾರೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು.

ಈ ವೇಳೆ ಜಿಲ್ಲಾಧಿಕಾರಿ ಕೆ.ಎನ್ ರಮೇಶ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎನ್ ರಮೇಶ್ ಸೇರಿದಂತೆ ಹಲವರು ಇದ್ದರು

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!