10 ನೇ ತರಗತಿ ಮಕ್ಕಳಿಗೆ ಪ್ರಶ್ನಾಕೋಟಿ ಬಿಡುಗಡೆಗೊಳಿಸಿದ ಶಿಕ್ಷಣ ಸಚಿವ ಸುರೇಶ್
1 min readಚಿಕ್ಕಮಗಳೂರು : 10 ನೇ ತರಗತಿ ಮಕ್ಕಳಿಗೆ ಪ್ರಶ್ನಾಕೋಟಿಯನ್ನು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ರವರು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಇಂದು ಬಿಡುಗಡೆಗೋಳಿಸಿದರು.
ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ರವರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮೂರು ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಪರೀಕ್ಷೆಯ ಪಠ್ಯಚಟುವಟಿಕೆಯ ಬಗ್ಗೆ ಸಲಹೆ ನೀಡಿದರಲ್ಲದೆ, 10 ನೇ ತರಗತಿ ಮಕ್ಕಳಿಗೆ ಪ್ರಶ್ನಾಕೋಟಿಯನ್ನು ಬಿಡುಗಡೆ ಮಾಡಿದರು. ಇದೇ ವೇಳೆ ಸಭೆಯಲ್ಲಿ ಮಾತನಾಡಿದ ಅವರು 1 ರಿಂದ 9 ನೇ ತರಗತಿ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿರ್ಧಾರಕ್ಕಾಗಿ ಕಾಯುತ್ತಿದ್ದೇವೆ, ಸಂಬಂಧಪಟ್ಟವರ ಕರೆದು ಚರ್ಚಿಸಿದ್ದೇವೆ, ಅವರೆಲ್ಲರ ಅಭಿಪ್ರಾಯ ಸ್ವೀಕರಿಸಿದ್ದೇವೆ, ನಾವು ಒಂದು ಹಂತಕ್ಕೆ ಬಂದಿದ್ದೇವೆ ಇನ್ನೇರಡು ದಿನಗಳಲ್ಲಿ ಅಧಿಕಾರಿಗಳ ಜೊತೆ ಚರ್ಚಿಸಿ ಶಿಕ್ಷಣ ಇಲಾಖೆ ತೀರ್ಮಾನ ಪ್ರಕಟಿಸಲಿದೆ ಎಂದು ಹೇಳಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g