ದಶಕಗಳ ವಿವಾದ ಅಂತ್ಯ: ಶಿಲುಬೆ ಸ್ಥಳಾಂತರ
1 min readಚಿಕ್ಕಮಗಳೂರು: ರಾಜ್ಯದಲ್ಲಿ ಕೋಮು ಸೌಹಾರ್ದದತೆ ಹಾಳುಮಾಡುವಂತಹ ಘಟನೆಗಳು ನಡೆಯುತ್ತಿರುವಾಗಲೇ ಜಿಲ್ಲೆಯಲ್ಲಿ 130 ವರ್ಷಗಳ ವಿವಾದಿತ ಸ್ಥಳವನ್ನ ಕ್ರೈಸ್ತ ಸಮುದಾಯ ಶಾಂತಿಯುತವಾಗಿ ಬಗೆಹರಿಸಿಕೊಂಡಿದೆ.
ಮೂಡಿಗೆರೆ ಪಟ್ಟಣದ ಹೃದಯ ಭಾಗದಲ್ಲಿದ್ದ ಕ್ರೈಸ್ತ ಸಮುದಾಯ, ಶಿಲುಬೆಯನ್ನ ಸಮುದಾಯದ ಮುಖಂಡರು ಹಾಗೂ ಪಟ್ಟಣ ಪಂಚಾಯಿತಿ ಮಾತುಕತೆ ಮೂಲಕ ಶಾಂತಿಯುತವಾಗಿ ಬಗೆಹರಿಸಿಕೊಂಡಿದೆ. ಮೂಡಿಗೆರೆ ಪಟ್ಟಣದಲ್ಲಿ 1884 ರಲ್ಲಿ ಸ್ಯಾಮುಯಲ್ ಎಂಬ ವ್ಯಕ್ತಿ ಮೃತಪಟ್ಟಿದ್ದರು. ಆಗ ಕ್ರೈಸ್ತ ಸಮುದಾಯ ಬಸ್ ನಿಲ್ದಾಣದ ಮುಂಭಾಗದ ಜಾಗದಲ್ಲೇ ಅವರ ಅಂತ್ಯ ಸಂಸ್ಕಾರ ಮಾಡಿತ್ತು. ಅಂದಿನಿಂದಲೂ ಈ ಜಾಗ ವಿವಾದದಿಂದ ಕೂಡಿತ್ತು. ಪಟ್ಟಣ ಪಂಚಾಯಿತಿ ನಾಲ್ಕೈದು ದಶಕಗಳಿಂದ ಮಳಿಗೆ ನಿರ್ಮಿಸಲು ಈ ವಿವಾದಿತ ಶಿಲುಬೆಯನ್ನ ತೆರವುಗೊಳಿಸಲು ಮುಂದಾದರೂ ಸಾಧ್ಯವಾಗಿರಲಿಲ್ಲ. ಆದರೆ, ಇಂದು ಪಟ್ಟಣ ಪಂಚಾಯಿತಿಯ ಅಭಿವೃದ್ಧಿ ಕಾರ್ಯಕ್ಕೆ ಕೈ ಜೋಡಿಸಿರೋ ಕ್ರೈಸ್ತ ಸಮುದಾಯ ಪಟ್ಟಣ ಪಂಚಾತಿಯ ವತಿಯಿಂದ ಪೂಜೆ ಮಾಡಿ ಶಿಲುಬೆಯನ್ನ ಸ್ಥಳಾಂತರಿಸಿದ್ದಾರೆ
. ಕ್ರೈಸ್ತರ ಸ್ಮಶಾನದಲ್ಲಿ ಪೂಜೆ ಮಾಡಿ ಮತ್ತೊಮ್ಮೆ ಸಮಾಧಿ ಮಾಡಿದ್ದಾರೆ. ಸುಮಾರು ಎರಡು ಗಂಟೆ ಕಾರ್ಯಚರಣೆ ನಡೆಸಿದ್ದು 130 ವರ್ಷವಾದ ಕಾರಣ ನೆಲದ ಒಳಭಾಗದಲ್ಲಿ ಏನೂ ಇರಲಿಲ್ಲ. ಹಾಗಾಗಿ, ಕ್ರೈಸ್ತರು ಸಮಾಧಿಯ ಮಣ್ಣನ್ನ ತೆಗೆದುಕೊಂಡು ಹೋಗಿ ಮತ್ತೆ ಮಣ್ಣು ಮಾಡಿ ಅದರ ಮೇಲೆ ಶಿಲುಬೆ ಪ್ರತಿಷ್ಠಾಪಿಸಿದ್ದಾರೆ. ಈಗ ಆ ಜಾಗದಲ್ಲಿ ಪಟ್ಟಣ ಪಂಚಾಯಿತಿ ಮಳಿಗೆ ನಿರ್ಮಾಣ ಮಾಡಲು ಮುಂದಾಗಿದ್ದು ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g