ಈಶ್ವರಪ್ಪ ನಿರ್ಣಯ ಪಕ್ಷದ, ರಾಷ್ಟ್ರದ ಹಿತಕ್ಕೆ ಮಾರಕವಾಗದಿರಲಿ : ಸಿ.ಟಿ ರವಿ
1 min read
ಪಕ್ಷದ ವಿರುದ್ಧ ಬಂಡೆದ್ದಿರುವ ಕೆ.ಎಸ್ ಈಶ್ವರಪ್ಪರನ್ನು ಭೇಟಿ ಮಾಡಿ ನಿಮ್ಮ ನಿರ್ಣಯ ಪಕ್ಷ ಹಾಗೂ ರಾಷ್ಟ್ರದ ಹಿತಕ್ಕೆ ಮಾರಕವಾಗಿರಬಾರದು ಎಂದು ವಿನಂತಿ ಮಾಡಿದ್ದೇನೆ ಎಂದು ಮಾಜಿ ಶಾಸಕ ಸಿ.ಟಿ ರವಿ ಹೇಳಿದ್ದಾರೆ .
ಯಡಿಯೂರಪ್ಪ ವಿರುದ್ಧ ಕೆಂಡಾಮಂಡಲರಾಗಿರುವ ಮಾಜಿ ಡಿ.ಸಿಎಂ ಕೆ.ಎಸ್ ಈಶ್ವರಪ್ಪ ಬಿಜೆಪಿ ಪಕ್ಷದ ವಿರುದ್ಧವೇ ಬಂಡೆದ್ದು ಶಿವಮೊಗ್ಗದಲ್ಲಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿರುವುದಕ್ಕೆ ಈಶ್ವರಪ್ಪ ಆಪ್ತರಲ್ಲಿ ಗುರುತಿಸಿಕೊಂಡಿರುವ ಸಿ.ಟಿ ರವಿ ಮನವೊಲಿಕೆಗೆ ಪ್ರಯತ್ನಿಸಿರುವುದಾಗಿ ಹೇಳಿದ್ದಾರೆ. ಚಿಕ್ಕಮಗಳೂರಿನ ತಮ್ಮ ನಿವಾಸದಲ್ಲಿ ಭೇಟಿಯಾದ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ರವಿ ಈಶ್ವರಪ್ಪ ತಮ್ಮ ನಿರ್ಧಾರ ಪಕ್ಷದ ಹಿತ ರಾಷ್ಟ್ರದ ಹಿತಕ್ಕೆ ಮಾರಕವಾಗಿರಬಾರದು ಎಂದು ವಿನಂತಿ ಮಾಡಿದ್ದೇನೆ ಎಂದರು. ನಿಮಗೆ ಪಕ್ಷದ ನಡೆಯಿಂದ ಬೇಸರವಿಲ್ಲವೇ ಎಂಬ ಪ್ರಶ್ನೆಗೆ ನಾನಂತೂ ಬಿಜೆಪಿಗೆ ದ್ರೋಹ ಬಗೆದಿಲ್ಲ ಪಕ್ಷ ನಿಷ್ಠೆ ಪರಿಶ್ರಮದಿಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಪಡೆದಿದ್ದೆ ಈಗಲೂ ಶಕ್ತಿ ಮೀರಿ ಕೆಲಸ ಮಾಡುತ್ತೇನೆ ಎಂದಿದ್ದಾರೆ ಇದೇ ವೇಳೆ ನನ್ನ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಟಿಕೆಟ್ ದೊರೆಯದಿರುವುದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g